ಮಳೆ : ಬೆಳಗಾವಿ ಜಿಲ್ಲೆ ಐದು ತಾಲೂಕುಗಳ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.
ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಿಗೂ ಬುಧವಾರ (ಜು.26) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement