ಕನ್ನಡದಲ್ಲೇ ಟ್ವೀಟ್‌ ಮಾಡಿದ ನೂತನ ರಾಜ್ಯಪಾಲರು..!

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದನ್ನು ಥಾವರ್‌ಚಂದ್‌ ಗೆಹ್ಲೋಟ್‌ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ.
ಭಾರತ ಸಂವಿಧಾನದ ಮತ್ತು ಕಾನೂನಿನ ಪರಿರಕ್ಷಣೆ, ಸಂರಕ್ಷಣೆ ಮತ್ತು ಪ್ರತಿರಕ್ಷಣೆ ಹಾಗೂ ಕರ್ನಾಟಕ ರಾಜ್ಯದ ಜನತೆಯ ಸೇವೆ ಮತ್ತು ಯೋಗಕ್ಷೇಮಕ್ಕಾಗಿ ಪ್ರತಿಬದ್ಧನಾಗಿರುತ್ತೇನೆಂದು ನಾನು ಇಂದು ಕರ್ನಾಟಕ ರಾಜ್ಯದ ರಾಜ್ಯಪಾಲನಾಗಿ ಪ್ರಮಾಣ ವಚನ ಸ್ವೀಕರಿಸಿರುತ್ತೇನೆʼ ಎಂದು ಥಾವರ್‌ಚಂದ್‌ ಗೆಹ್ಲೋಟ್‌ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿ ಗಮನ ಸೆಳೆದಿದ್ದಾರೆ.
ಥಾವರ್‌ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕದ 19ನೇ ರಾಜ್ಯಪಾಲರಾಗಿ ಭಾನುವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement