‘ಸುವರ್ಣ ಮಹೋತ್ಸವ’ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಏರಿಕೆ : ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು 50 ಸಾವಿರ ರೂ.ಗಳಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಗುರುವಾರ ಪ್ರಕಟಿಸಿದ್ದಾರೆ.
ಕರ್ನಾಟಕ ಸಂಭ್ರಮ – 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 50 ಮಹಿಳಾ ಸಾಧಕಿಯರಿಗೆ ಮತ್ತು 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು, ಗುರುವಾರ ಈ ಪ್ರಶಸ್ತಿ ಮೊತ್ತವನ್ನು 50,000 ರೂ.ದಿಂದ 1 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.
ಇದೊಂದು ಐತಿಹಾಸಿಕ ಸಂದರ್ಭ ಆಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ 1 ಲಕ್ಷ ರೂ.ಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement