ಸಿಎಂ ಹಣದ ಅವ್ಯವಹಾರ: ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮಾರಿಷಿಸ್‌ಗೆ ತೆರಳಿ ಅಕ್ರಮ ಹಣ ಇರಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪದ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬುಜೆಪಿ ಶಾಸಕ ಮಾಡಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪ ಕುರಿತು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ನೇತೃತ್ವದ ತನಿಖೆ ನಡೆಸಬೇಕು. “ನ ಖಾವುಂಗಾ ನ ಖಾನೇದುಂಗಾʼ ಎಂಬ ಹೇಳಿಕೆಗೆ ಪ್ರಧಾನಿ ಮೋದಿ ಬದ್ಧವಾಗಿರಬೇಕು ಎಂದು ಅಭಿಪ್ರಾಯಪಟ್ಟರು.
ಯಡಿಯೂರಪ್ಪ ಕುಟುಂಬದ ಸದಸ್ಯರೇ ಹಾವು, ಚೇಳುಗಳಂತೆ ಕಾಡುತ್ತಿದ್ದಾರೆ ಎಂದು ಹಿರಿಯ ಬಿಜೆಪಿ ಶಾಸಕ ಮಾಡಿದ ಆರೋಪವನ್ನು ಬಿಜೆಪಿ ನಿರ್ಲಕ್ಷಿಸಬಾರದು ಎಂದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಾಗವತ ಕಥಾ ನಾಟಕದಲ್ಲಿ ರಾಕ್ಷಸನ ಪಾತ್ರ ಮಾಡಿದ್ದ ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರ ಮಾಡಿದ್ದ ಮತ್ತೊಬ್ಬ ಬಾಲಕ...!

ನಿಮ್ಮ ಕಾಮೆಂಟ್ ಬರೆಯಿರಿ

advertisement