ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯ ನಾವದಗಿ ಸಮೀಪ ನಡೆದಿದೆ.
ದೇವರ ಹರಕೆ ತೀರಿಸಲೆಂದು ಹೋಗಿದ್ದವರು ಹರಕೆ ತೀರಿಸಿ ಮನೆಗೆ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತರನ್ನು ದೀಪಕ ರಾಥೋಡ (45), ಅವರ ಸಹೋದರನ ಪುತ್ರ ಯುವರಾಜ ರಾಥೋಡ (17) ಮತ್ತು ಸೋದರಳಿಯ ರಾಹುಲ್ ಚೌಹಾಣ (17) ಎಂದು ಗುರುತಿಸಲಾಗಿದೆ.

ಇವರೆಲ್ಲರೂ ಕಲಬುರಗಿಯ ಕಮಲಾಪುರದ ಗೋಗಿ ತಾಂಡಾ ನಿವಾಸಿಗಳು. ದೇವರ ಹರಕೆ ತೀರಿಸಲೆಂದು ಕುಟುಂಬಸ್ಥರ ಜತೆ ಸಾವಳಗಿ ತಾಂಡಾಕ್ಕೆ ಹೋಗಿದ್ದರು. ಪೂಜೆ ಮುಗಿದ ಬಳಿಕ ಮಂಗಳವಾರ ರಾತ್ರಿ ಹಿಂದಿರುಗಿ ಬರುತ್ತಿರುವಾಗ ಈ ದುರಂತ ಸಂಭವಿಸಿದೆ. ಕುಟುಂಬಸ್ಥರು ಕ್ರೂಸರ್ ವಾಹನದಲ್ಲಿ ಬರುತ್ತಿದ್ದರೆ ಈ ಮೂವರೂ ಬೈಕ್​ನಲ್ಲಿ ವಾಪಸ್‌ ಬರುತ್ತಿದ್ದರು. ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೂವರೂ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement