ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಕಣ್ಮರೆಯಾಗಿದ್ದ ಮಹಿಳೆಯ ಮೃತ ದೇಹ ಗಂಗಾವಳಿ ಬಳಿ ನದಿ ತೀರದಲ್ಲಿ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗಂಗೆಕೊಳ್ಳದಲ್ಲಿ ಉಳುವರೆ ನಿವಾಸಿ ಸಣ್ಣಿ ಗೌಡ ಎಂಬವರ ಮೃತದೇಹ ಮಂಗಳವಾರ ನಸುಕಿನ ಜಾವ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಜುಲೈ 16 ರಂದು ಶಿರೂರು ಬಳಿ ಗುಡ್ಡ ಕುಸಿದು ಗಂಗಾವಳಿ ನದಿಯಲ್ಲಿ ಗುಡ್ಡದ ಕಲ್ಲು ಮಣ್ಣುಗಳು ನದಿಗೆ ಬಿದ್ದು ಹೊಳೆಯ ಮತ್ತೊಂದು ದಂಡೆ ಬದಿಯ ಉಳುವರೆ ಗ್ರಾಮಕ್ಕೆ ಭಾರೀ ಪ್ರಮಾಣದಲ್ಲಿ ನದಿಯ ನೀರು ಅಪ್ಪಳಿಸಿದ ಪರಿಣಾಮ ಸಣ್ಣಿ ಗೌಡ ನೀರಿನಲ್ಲಿ ಕೊಚ್ಚಿ ಹೋಗಿದ್ದರು.
ಕಳೆದ ಒಂದು ವಾರದಿಂದ ಸಣ್ಣಿ ಗೌಡ ಸೇರಿದಂತೆ ದುರ್ಘಟನೆಯಲ್ಲಿ ಕಣ್ಮರೆಯಾಗಿದ್ದವರ ಶೋಧ ಕಾರ್ಯ ನಡೆಸಲಾಗುತ್ತಿದೆ. ಒಂದು ವಾರದ ನಂತರ ಸಣ್ಣಿ ಗೌಡ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದುವರೆಗೆ ಒಟ್ಟು 8 ಜನರ ಮೃತ ದೇಹಗಳು ಪತ್ತೆಯಾದಂತಾಗಿದೆ. ಮಹಿಳೆಯ ಮೃತದೇಹದ ಕುರಿತು ಜಿಲ್ಲಾಡಳಿತ ಮಾಹಿತಿ ಖಚಿತಪಡಿಸಬೇಕಿದೆ.
ನಡೆದಿದೆ. ಮಂಗಳವಾರ ಸೇನಾಪಡೆಯ 30 ಕ್ಕೂ ಹೆಚ್ಜು ಯೋಧರು, ಮೆಟಲ್ ಡಿಕ್ಟೇರರ್ ಮೂಲಕ ನದಿಯ ಮಧ್ಯಭಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಎನ್ಡಿಆರ್ ಎಫ್ (NDRF) ಮತ್ತು ಎಸ್ಡಿಆರ್ಎಫ್ (SDRF) ಸಿಬ್ಬಂದಿ ಅವರಿಗೆ ಸಾಥ್ ನೀಡಿದ್ದಾರೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ನೆರವು ಪಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ