ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ : ಬೆಳಗಾವಿಯಿಂದ ಶಂಕಿತನನ್ನು ಕರೆದೊಯ್ದ ನಾಗ್ಪುರ ಪೊಲೀಸರು

ಬೆಳಗಾವಿ :ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಸಲ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ನಾಗ್ಪುರ ಪೊಲೀಸರು ಬೆಳಗಾವಿ ಹಿಂಡಲಗಾ ಕೇಂದ್ರ ಜೈಲಿನಿಂದ ತಮ್ಮ ವಶಕ್ಕೆ ಪಡೆದು ನಾಗ್ಪುರಕ್ಕೆ ಕರೆದೊಯ್ದಿದ್ದಾರೆ.
ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಸಂಬಂಧ ಜಯೇಶ್ ಪೂಜಾರಿ ಉರುಫ್‌ ಜಯೇಶ ಕಾಂತ ಎಂಬವನ ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಮಂಗಳವಾರ ಬೆಳಿಗ್ಗೆ ಆತನನ್ನು ಹಿಂಡಲಗಾ ಜೈಲಿನಿಂದ ವಿಮಾನ ಮೂಲಕ ನಾಗಪುರಕ್ಕೆ ಕರೆದೊಯ್ಯಲಾಗಿದೆ.
ಈತ ಜನವರಿ 14 ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಕರೆ ಮಾಡಿ 100 ಕೋಟಿ ನೀಡದೇ ಇದ್ದರೆ ಸಚಿವರನ್ನು ಕೊಲೆ ಮಾಡುವ ಬೆದರಿಕೆ ಒಡ್ಡಿದ್ದ. ಆ ಸಂದರ್ಭದಲ್ಲಿ ತಾನು ದಾವುದ್ ಇಬ್ರಾಹಿಂ ಗುಂಪಿನ ಸದಸ್ಯ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡನೇ ಸಲ 10 ಕೋಟಿ ರೂಪಾಯಿ ಪಾವತಿಗೆ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಅವರ ಕಚೇರಿಗೆ ಫೋನ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದು ಪ್ರಕರಣದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement