ಬೆಂಗಳೂರು: ರಂಗಭೂಮಿ ಕಲಾವಿದೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ನಗರದ ನಂದಿನಿಲೇಔಟ್ನ ಗಣೇಶ ಬ್ಲಾಕ್ನಲ್ಲಿ ಮಾರ್ಚ್ 18ರಂದು ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ಆ್ಯಸಿಡ್ ದಾಳಿಯಿಂದ ಗಾಯಗೊಂಡ ದೇವಿ ಅವರು ರಂಗಭೂಮಿ ಕಲಾವಿದೆಯಾಗಿದ್ದಾರೆ. ಮಾರ್ಚ್18 ರಂದು ಮನೆಯ ಜಗಲಿಯ ಮೇಲೆ ಮಲಗಿದ್ದ ವೇಳೆ ಆಸಿಡ್ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಿ ಅವರು ಈ ಹಿಂದೆ ಬಿಎಂಟಿಸಿಯಲ್ಲಿ ನಿರ್ವಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಅನಾರೋಗ್ಯದ ಕಾರಣ ನೀಡಿ ಹುದ್ದೆ ತೊರೆದಿದ್ದಾರೆ.
ದೇವಿ ಅವರು ರಂಗಭೂಮಿ ಕಲಾವಿದೆಯಾಗಿದ್ದು, ರಂಗಭೂಮಿಯ ಸಹಪಾಠಿಗಳಿಂದಲೇ ಈ ದುಷ್ಕೃತ್ಯ ನಡೆದಿದೆ. ಆ್ಯಸಿಡ್ ದಾಳಿ ನಡೆಸಿದ ಆರೋಪಿಗಳಾದ ರಮೇಶ್, ಸ್ವಾತಿ ಮತ್ತು ಯೋಗೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ನಂದಿನಿಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ