ಮೈಚಾಂಗ್ ಚಂಡಮಾರುತ : ಚೆನ್ನೈನಲ್ಲಿ ವಿಷ್ಣು ವಿಶಾಲ ಮನೆಯಲ್ಲಿ 24 ಗಂಟೆಗಳ ಕಾಲ ಸಿಲುಕಿದ್ದ ಬಾಲಿವುಡ್‌ ನಟ ಅಮೀರ್ ಖಾನ್ ರಕ್ಷಣೆ

ಚೆನ್ನೈ: ಮೈಚಾಂಗ್ ಚಂಡಮಾರುತದಿಂದ ಭಾರೀ ಮಳೆಯಿಂದಾಗಿ ಜಲಾವೃತವಾಗಿದ್ದ ಚೆನ್ನೈನಲ್ಲಿ ಸಿಲುಕಿದ್ದ ಅಮೀರ್ ಖಾನ್ ಅವರನ್ನು ತಮಿಳು ನಟ ವಿಷ್ಣು ವಿಶಾಲ ಅವರೊಂದಿಗೆ ರಕ್ಷಿಸಲಾಗಿದೆ.
ಖಾನ್ ಮತ್ತು ಇತರರ ರಕ್ಷಣೆ ಮಾಡುತ್ತಿರುವ ಚಿತ್ರಗಳನ್ನು ವಿಶಾಲ್ X ನಲ್ಲಿ ಹಂಚಿಕೊಂಡಿದ್ದಾರೆ. “ನಮ್ಮಂತಹ ಸಿಕ್ಕಿಬಿದ್ದಿರುವವರಿಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದಗಳು. ಕರಪಕ್ಕಂನಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ 3 ಬೋಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಪರೀಕ್ಷೆಯ ಸಮಯದಲ್ಲಿ ತಮಿಳುನಾಡು ಸರ್ಕಾರ ಹಾಗೂ ಅವಿರತವಾಗಿ ಕೆಲಸ ಮಾಡುತ್ತಿರುವ ಎಲ್ಲರಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ.

ಸುಮಾರು 24 ಗಂಟೆಗಳ ಕಾಲ ಸಿಕ್ಕಿಬಿದ್ದ ನಟರನ್ನು ಅಗ್ನಿಶಾಮಕ ದಳ ಮತ್ತು ರಕ್ಷಣಾ ಇಲಾಖೆ ಸುರಕ್ಷಿತವಾಗಿ ಕರೆತಂದಿದೆ. ಅಮೀರ್ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿ ಜೀನತ್ ಹುಸೇನ್ ಅವರೊಂದಿಗೆ ಇರಲು ಚೆನ್ನೈಗೆ ತೆರಳಿದ್ದರು. ನಟ ವಿಷ್ಣು ವಿಶಾಲ ಅವರು ತಮ್ಮ ರಕ್ಷಣೆಯ ವೈರಲ್ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ, ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ತ್ವರಿತ ಸಹಾಯಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಅಮೀರ್ ಪ್ರಸ್ತುತ ವಿಷ್ಣು ವಿಶಾಲ ಜೊತೆ ಕರ್ಪಾಕ್ಕಂನಲ್ಲಿ ನೆಲೆಸಿದ್ದಾರೆ.

ಚೆನ್ನೈ ತೀವ್ರ ಪ್ರವಾಹವನ್ನು ಎದುರಿಸುತ್ತಿದೆ, ಮರೀನಾ ಬೀಚ್ ಮತ್ತು ಮೀನಂಬಾಕ್ಕಂ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಪ್ರದೇಶಗಳು ಮುಳುಗಿವೆ. ಮೈಚಾಂಗ್ ಚಂಡಮಾರುತದ ಪ್ರಭಾವವು ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್‌ಗಢ ಮತ್ತು ಒಡಿಶಾದವರೆಗೆ ವಿಸ್ತರಿಸಿದೆ. ಈಶಾನ್ಯ ರಾಜ್ಯಗಳು, ಜಾರ್ಖಂಡ್ ಮತ್ತು ಬಿಹಾರಗಳು ಲಘು ಮಳೆಯೊಂದಿಗೆ ಪರೋಕ್ಷ ಪರಿಣಾಮಗಳನ್ನು ನಿರೀಕ್ಷಿಸುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್‌ ಪ್ರವೇಶ ; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement