ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್​ ಬಳಿ ನಡೆದ ಬಗ್ಗೆ ವರದಿಯಾಗಿದೆ.
ಮೃತರು ಮಧ್ಯಪ್ರದೇಶ ಮೂಲದ ದಂಪತಿ, ಇಬ್ಬರು ಮಕ್ಕಳು ಎಂದು ಹೇಳಲಾಗಿದ್ದು, ಹೈದರಾಬಾದ್‌ಗೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಳಗಾನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಎರಡು ಜೆಸಿಬಿಯಿಂದ ಅಪಘಾತ ವಾಹನಗಳ ತೆರವು ಮಾಡಿದ್ದು, ಮೃತ ದೇಹಗಳನ್ನು ಸಿಂಧನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ತನಿಖೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement