ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡಗೆ ಐಟಿ ಶಾಕ್

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ.
ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಗಾಯತ್ರಿ ಶಾಂತೇಗೌಡ ಅವರ ಬೇಲೂರಿನ ಅಳಿಯನ ಮನೆ ಮೇಲೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಅಲ್ಲಿಯೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಗಾಯತ್ರಿ ಗೌಡ ಅವರ ಮೇಲೆ ಐಟಿ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗುರುವಾರ ನಡೆದ ದಾಳಿಯ ಹಿಂದೆ ಬಿಜೆಪಿ ಮುಖಂಡ ಸಿಟಿ ರವಿ ಇದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement