ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕದ ವಿಚಾರವಾಗಿ ಅಸಮಾಧಾನಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬೆನ್ನಲ್ಲೇ ‘ನ ದೈನ್ಯಂ, ನ ಪಲಾಯನಂ’ ಎಂದು ಮಾರ್ಮಿಕವಾಗಿ
ಟ್ವೀಟ್ ಮಾಡಿದ್ದಾರೆ.
ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಆತನ ಜೀವನವು ಅಂತ್ಯವಿಲ್ಲದ ಸವಾಲು, ಹಾಗೂ ಆ ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಕೇವಲ ಸವಾಲುಗಳಾಗಿರುತ್ತವೆ ಎಂದು ಅವರು ಬರೆದಿದ್ದಾರೆ.
ಶುಕ್ರವಾರ ಬೆಂಗಳೂರಿನ ಐಟಿಸಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಅದಕ್ಕೂ ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶ ನೀಡಬೇಕು ಎಂದು ಯತ್ನಾಳ ಅವರು ತಮ್ಮನ್ನು ಭೇಟಿ ಮಾಡಿದ ವೀಕ್ಷಕರ ಬಳಿ ಪ್ರಸ್ತಾಪ ಮಾಡಿದ್ದರು. ಉತ್ತರ ಕರ್ನಾಟಕಕ್ಕೆ ಅವಕಾಶ ನೀಡಬೇಕು ಎಂಬ ಬೇಡಿಕೆ ಮಂಡಿಸಿದ್ದರು. ಆದರೆ ಈ ವೇಳೆ ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ವೀಕ್ಷಕರು ಅವರಿಗೆ ಹೇಳಿದ್ದಾರೆ. ಆದರೆ ಅವರು ತಕ್ಷಣವೇ ಅಲ್ಲಿಂದ ಹೊರನಡೆದಿದ್ದಾರೆ. ಯತ್ನಾಳ ಜೊತೆ ಸಭೆಯಿಂದ ಹೊರನಡೆದ ನಂತರ ಶಾಸಕ ರಮೇಶ ಜಾರಕಿಹೊಳಿ ಕೂಡ ಹೊರನಡೆದ್ದಾರೆ.
ನ ದೈನ್ಯಂ, ನ ಪಲಾಯನಂ ಎಂದರೆ ತಲೆ ಬಾಗುವುದಿಲ್ಲ, ಪಲಾಯನ ಮಾಡುವುದಿಲ್ಲ ಎಂದಾಗುತ್ತದೆ.
ನಿಮ್ಮ ಕಾಮೆಂಟ್ ಬರೆಯಿರಿ