
ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಎಸ್ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿಬಂದ ನಂತರ ಅವರನ್ನು ಬದಲಾಯಿಸಿ ಕುಂದಾಪುಡ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ನೇಮಿಸಿದ್ದಾರೆ ಎಂದು ವರದಿ ತಿಳಿಸಿದೆ.



ನಿಮ್ಮ ಕಾಮೆಂಟ್ ಬರೆಯಿರಿ