ಹ್ನಾಥಿಯಲ್: ದಕ್ಷಿಣ ಮಿಜೋರಾಂನ ಹ್ನಾಥಿಯಾಲ್ ಗ್ರಾಮದಲ್ಲಿ ಸೋಮವಾರ ಸಂಜೆ ಕಲ್ಲಿನ ಕ್ವಾರಿ ಕುಸಿದ ನಂತರ ಹಲವಾರು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಈ ಪ್ರದೇಶದಲ್ಲಿ ಹಲವಾರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಿಜೋರಾಂನ ಹ್ನಾಥಿಯಾಲ್ ಜಿಲ್ಲೆಯಲ್ಲಿ ಸೋಮವಾರ ಕಲ್ಲಿನ ಕ್ವಾರಿ ಕುಸಿದ ನಂತರ 10ರಿಂದ 15 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್ ಪ್ರದೇಶದಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ಅವಶೇಷಗಳೊಳಗೆ ಸಿಲುಕಿರುವವರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ. ಆದರೆ 10ಕ್ಕೂ ಹೆಚ್ಚು ಕಾರ್ಮಿಕರು ಹೆಚ್ಚು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಅವಶೇಷಗಳನ್ನು ತೆರವುಗೊಳಿಸಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಣೆಯಾದ ಹೆಚ್ಚಿನ ಕಾರ್ಮಿಕರು ಮಿಜೋ ಅಲ್ಲದವರು. ಅವರು ನಿರ್ಮಾಣ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಬಿಸಿಐ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ನ ಕಾರ್ಮಿಕರು ಮೌದರ್ಹ್ ಗ್ರಾಮದ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಿನೀತ್ ಕುಮಾರ ಸುದ್ದಿಸಂಸ್ಥೆಗೆ ತಿಳಿಸಿದರು.
ಎಸ್ಪಿ ಪ್ರಕಾರ, ಒಬ್ಬ ಕಾರ್ಮಿಕ ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಇತರ 12 ಮಂದಿ ಅವಶೇಷಗಳಲ್ಲಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಇದುವರೆಗೆ ಯಾರನ್ನೂ ರಕ್ಷಿಸಲಾಗಿಲ್ಲ.
ಘಟನೆ ವರದಿಯಾದ ಕೂಡಲೇ ಹ್ನಾಹತಿಯಾಲ್ ಜಿಲ್ಲಾಧಿಕಾರಿಗಳು ಮತ್ತು ವೈದ್ಯಕೀಯ ತಂಡ ಸ್ಥಳಕ್ಕೆ ಧಾವಿಸಿತು. ಹತ್ತಿರದ ಹಳ್ಳಿಗಳ ಯಂಗ್ ಮಿಜೋ ಅಸೋಸಿಯೇಷನ್ (ವೈಎಂಎ) ಸ್ವಯಂಸೇವಕರು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು.
ಕಾರ್ಮಿಕರು ಕ್ವಾರಿಯಲ್ಲಿ ಕಲ್ಲುಗಳನ್ನು ಒಡೆದು ಸಂಗ್ರಹಿಸುತ್ತಿದ್ದಾಗ ಮೇಲಿನಿಂದ ಸಡಿಲವಾದ ಮಣ್ಣು ಕುಸಿದಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ