ಅತ್ಯಾಚಾರ ಸಂತ್ರಸ್ತೆ ಕೊಲೆ ಮಾಡಿದ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ; ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಬಳಸಿ ಪ್ರಕರಣ ಭೇದಿಸಿದ ಪೊಲೀಸರು..!

 ಭುವನೇಶ್ವರ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಕೊಂದು ದೇಹವನ್ನು ತುಂಡು ಮಾಡಿ ದೇಹದ ಭಾಗಗಳನ್ನು ವಿವಿಧೆಡೆ ಎಸೆದಿರುವ ಘಟನೆ ಒಡಿಶಾದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಪೊಲೀಸರು ಆರಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಪ್ರಕರಣ ಭೇದಿಸಿದ್ದಾರೆ..!
ಪೊಲೀಸರ ಪ್ರಕಾರ, ಆರೋಪಿಯನ್ನು ಕುನು ಕಿಸನ್‌ (24) ಎಂದು ಗುರುತಿಸಲಾಗಿದ್ದು, ಈತನನ್ನು ಅಪಹರಣ ಮತ್ತು ಕೊಲೆ ಆರೋಪದ ಮೇಲೆ ಸಹಚರನೊಂದಿಗೆ ಬಂಧಿಸಲಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಸುಂದರಗಢ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿತ್ತು. ಸಂತ್ರಸ್ತೆ ಧರೂದಿಹಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಆತನನ್ನು ಜೈಲಿನಿಂದ ಬಿಡುಗಡೆಯಾಗಿದ್ದ.
ಹುಡುಗಿ ಸುಂದರಗಢ್ ಜಿಲ್ಲೆಯವಳಾಗಿದ್ದರೂ, ಜರ್ಸುಗುಡಾ ಪಟ್ಟಣದಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿ ನೆಲೆಸಿದ್ದಳು. ತಿಂಗಳ ಹಿಂದೆ ತನ್ನ ಚಿಕ್ಕಮ್ಮನ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಡಿಸೆಂಬರ್ 7 ರಂದು ಪೊಲೀಸ್ ದೂರು ದಾಖಲಾಗಿತ್ತು. ಹುಡುಗಿಯ ಕುಟುಂಬದವರು ಆಕೆ ಕಾಣೆಯಾದ ದೂರನ್ನು ದಾಖಲಿಸಿದ ನಂತರ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ ಎಂದು ಜಾರ್ಸುಗುಡ ಪೊಲೀಸ್ ಅಧೀಕ್ಷಕರು ಹೇಳಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು ಹುಡುಗಿ ಇಬ್ಬರು ವ್ಯಕ್ತಿಗಳೊಂದಿಗೆ ಮೋಟಾರ್‌ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದುದನ್ನು ತೋರಿಸಿದೆ, ಅವರು ಹೆಲ್ಮೆಟ್ ಧರಿಸಿದ್ದರಿಂದ ಅವರ ಮುಖ ಮುಚ್ಚಿತ್ತು. ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ತಂತ್ರಜ್ಞಾನವನ್ನು ಬಳಸಿಕೊಂಡು, ಸುಂದರಗಢದಲ್ಲಿ ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಯಿತು. ವಿಚಾರಣೆಯ ಸಮಯದಲ್ಲಿ, ಆತ ಹುಡುಗಿಯನ್ನು ಕೊಂದು ಅವಳ ದೇಹದ ಭಾಗಗಳನ್ನು ಎರಡು ವಿಭಿನ್ನ ಸ್ಥಳಗಳಲ್ಲಿ ಎಸೆದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಎಸ್ಪಿ ಹೇಳಿದರು. ಆರೋಪಿಗಳು ಮೊದಲು ರೂರ್ಕೆಲಾ ಮತ್ತು ದಿಯೋಗರ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 143 ರಲ್ಲಿ ಹರಿತವಾದ ಚಾಕುವಿನಿಂದ ಸಂತ್ರಸ್ತೆಯ ಕತ್ತು ಸೀಳಿ, ಆಕೆಯ ದೇಹದ ಭಾಗಗಳನ್ನು ಬ್ರಹ್ಮಣಿ ನದಿಯ ತಾರ್ಕೆರಾ ನಲಿ ಮತ್ತು ಬಲುಘಾಟ್‌ನಲ್ಲಿ ಎಸೆದಿದ್ದಾರೆ ಎಂದು ಅವರು ಹೇಳಿದರು.
ಗಂಟೆಗಳ ಕಾಲ ಶೋಧ ಕಾರ್ಯಾಚರಣೆಯ ನಂತರ ಬಾಲಕಿಯ ತಲೆ ಸೇರಿದಂತೆ ದೇಹದ ಭಾಗಗಳು ಪತ್ತೆಯಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ವಿಚಾರಣೆ ವೇಳೆ ಆರೋಪಿಯು ಕಳೆದ ವರ್ಷ ಡಿಸೆಂಬರ್‌ನಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ನ್ಯಾಯಾಲಯದ ಮುಂದೆ ಹೇಳಿಕೆ ನೀಡದಂತೆ ಆಕೆಗೆ ಒತ್ತಾಯ ಮಾಡಿದ್ದ ಎಂದು ಎಸ್‌ಪಿ ತಿಳಿಸಿದ್ದಾರೆ.
ಸಂತ್ರಸ್ತೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದರೆ ಈ ಪ್ರಕರಣದಲ್ಲಿ ತಾನು ಅಪರಾಧಿ ಎಂದು ಸಾಬೀತಾಗುತ್ತದೆ ಎಂಬ ಭಯಕ್ಕೆ ಆತ ಸಂತ್ರಸ್ತ ಹುಡುಗಿಯನ್ನು ಕೊಲ್ಲಲ್ಲು ಯೋಜನೆ ರೂಪಿಸಿದ, ಮತ್ತು ಅದರ ಪ್ರಕಾರ ಯೋಜನೆಯನ್ನು ಕಾರ್ಯಗತಗೊಳಿಸಲು ತನ್ನ ಮೋಟಾರ್‌ಸೈಕಲ್ ನೋಂದಣಿ ಸಂಖ್ಯೆಯನ್ನೇ ಬದಲಾಯಿಸಿದ್ದ ಎಂದು ಅಧಿಕಾರಿ ಹೇಳಿದ್ದಾರೆ. ಶಂಕಿತ ಆರೋಪಿಯು ಡಿಸೆಂಬರ್ 15 ರಂದು ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕಾಗಿತ್ತು ಮತ್ತು ತನ್ನ ಬಗ್ಗೆ ಅನುಕೂಲಕರ ಹೇಳಿಕೆ ನೀಡಲು ಮನವೊಲಿಸಲು ಪ್ರಯತ್ನಿಸುತ್ತಿದ್ದ, ಆದರೆ ಹಾಗೆ ಮಾಡಲು ಆಕೆ ನಿರಾಕರಿಸಿದ್ದಳು. ನಂತರ, ಆರೋಪಿ ಮತ್ತು ಆತ ಸಹಚರನೊಬ್ಬ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದರು. ಮತ್ತು ಆ ಉದ್ದೇಶಕ್ಕಾಗಿ ಒಂದು ಚಾಕುವನ್ನು ಸಹ ಖರೀದಿಸಿದ್ದರು” ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆ ನಾಪತ್ತೆಯಾದ ಬಗ್ಗೆ ದೂರು ದಾಖಲಾದ ನಂತರ ಜಾರ್ಸುಗುಡಾದ ಸ್ಮಾರ್ಟ್ ಸಿಟಿ ಸಿಸಿಟಿವಿ ವ್ಯವಸ್ಥೆಯಲ್ಲಿ ಪೊಲೀಸರು ಕೃತಕ ಬುದ್ಧಿಮತ್ತೆ (AI) ವೈಶಿಷ್ಟ್ಯವನ್ನು ಬಳಸಿದರು. ಪೊಲೀಸರ ಪ್ರಕಾರ, ಕಾಣೆಯಾದ ಹುಡುಗಿಯ ಫೋಟೋವನ್ನು ಸಿಸ್ಟಮ್‌ಗೆ ಫೀಡ್ ಮಾಡಿದಾಗ, ಪೊಲೀಸರು ದ್ವಿಚಕ್ರ ವಾಹನದಲ್ಲಿ ಇಬ್ಬರು ಪುರುಷರೊಂದಿಗೆ ಆಕೆ ಹೋಗುತ್ತಿರುವ ಚಿತ್ರಗಳು ಕಂಡುಬಂತು. ಕೃತಕ ಬುದ್ಧಿಮತ್ತೆ (AI) ನಂತರ ಪೊಲೀಸ್ ದಾಖಲೆಗಳನ್ನು ಪರಿಶೀಲಿಸಲು ಸಹಾಯ ಮಾಡಿತು.
“ತಾಂತ್ರಿಕ ಫೋರೆನ್ಸಿಕ್ಸ್ ಮತ್ತು ನೆರೆಯ ಪ್ರದೇಶಗಳ ಸಿಸಿಟಿವಿ ದೃಶ್ಯಗಳನ್ನು ಬಳಸಿ ಕುನು ಕಿಸನ್ ನನ್ನು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆತರಲಾಯಿತು. ವಿಚಾರಣೆ ವೇಳೆ ಆರೋಪಿಯು ನಾಪತ್ತೆಯಾಗಿದ್ದ ಬಾಲಕಿಯನ್ನು ಕೊಂದು ಆಕೆಯ ದೇಹವನ್ನು ಸಣ್ಣ ಭಾಗಗಳಾಗಿ ಕತ್ತರಿಸಿ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಸ್ಪಿ ಪರ್ಮಾರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement