ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸತ್ಯನ್ ಚೌಧರಿ ಅವರನ್ನು ಭಾನುವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳದ ಬಹರಂಪುರದಲ್ಲಿ ಈ ಘಟನೆ ನಡೆದಿದೆ.
ಮುರ್ಷಿದಾಬಾದ್ನ ಟಿಎಂಸಿ) ಪ್ರಧಾನ ಕಾರ್ಯದರ್ಶಿ ಸತ್ಯನ್ ಚೌಧರಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪ್ರಕಟಿಸಲಾಯಿತು.
ಸ್ಥಳೀಯ ಟಿಎಂಸಿ ನಾಯಕರೊಬ್ಬರ ಪ್ರಕಾರ, ಬೈಕ್ಗಳಲ್ಲಿ ಆಗಮಿಸಿದ ಅಪರಿಚತ ವ್ಯಕ್ತಿಗಳ ಗುಂಪು ಚೌಧುರಿ ಅವರ ಮೇಲೆ ಅತ್ಯಂತ ಸಮೀಪದಿಂದ ಗುಂಡು ಹಾರಿಸಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಯಿತು, ಆದರೆ ಆಸ್ಪತ್ರೆ ತಲುಪುವ ಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಸತ್ಯನ್ ಅವರು ತಮ್ಮ ಕೆಲವು ಆಪ್ತ ಸಹಾಯಕರೊಂದಿಗೆ ಬಹರಂಪುರದ ಭಕುರಿ ಛೇದಕದಲ್ಲಿ ನಿರ್ಮಾಣ ಹಂತದಲ್ಲಿರುವ ಎತ್ತರದ ಕಟ್ಟಡವನ್ನು ಪರಿಶೀಲಿಸುತ್ತಿದ್ದಾಗ ಮೂವರು ಅಪರಿಚಿತ ಬಂದೂಕುಧಾರಿಗಳು ಎರಡು ಬೈಕ್ಗಳಲ್ಲಿ ಆಗಮಿಸಿ ಟಿಎಂಸಿ ನಾಯಕನ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗುಂಡಿನ ಸದ್ದು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿ ಚೌಧುರಿಯನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಸ್ಥಳೀಯ ವರದಿಗಳ ಪ್ರಕಾರ, ಸತ್ಯನ್ ಚೌಧರಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ಅಧೀರ ರಂಜನ್ ಚೌಧರಿ ಅವರಿಗೆ ನಿಕಟರಾಗಿದ್ದರು, ಆದರೆ ನಂತರ ಇಬ್ಬರೂ ದೂರವಾದರು ಮತ್ತು ಸತ್ಯನ್ ನಂತರ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಸೇರಿದ್ದರು. ಆದರೆ, ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಟಿಎಂಸಿ ನಾಯಕ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರಲಿಲ್ಲ ಎಂದು ಹೇಳಲಾಗಿದೆ.
ಭಾನುವಾರ ಮಧ್ಯಾಹ್ನ ಸತ್ಯನ್ ಚೌಧರಿ ಅವರನ್ನು ಪಾಯಿಂಟ್-ಬ್ಲ್ಯಾಂಕ್ ರೇಂಜ್ ನಲ್ಲಿ ಮಾರಣಾಂತಿಕವಾಗಿ ಗುಂಡಿಕ್ಕಿ ಕೊಲ್ಲಲಾಯಿತು, ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಟಿಎಂಸಿ ನಾಯಕನ ಹಂತಕರನ್ನು ಪತ್ತೆಹಚ್ಚಲು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
“ಘಟನೆಯ ತನಿಖೆ ಈಗಾಗಲೇ ಪ್ರಾರಂಭವಾಗಿದೆ. ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮುರ್ಷಿದಾಬಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂರ್ಯ ಪ್ರತಾಪ ಯಾದವ್ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ