ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನ

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.
ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ವಜಾಗೊಳಿಸಿದ ನಂತರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಕ್ಷಣಮಾತ್ರದಲ್ಲಿ ಅಲ್ಲಿಂದ ತೆರಳಿ ನಾಪತ್ತೆಯಾಗಿದ್ದರು. ಅವರನ್ನು ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡ ಅವರ ನಿವಾಸಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲೇ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿತ್ತು.
ಕೊನೆಗೂ ಲೋಕಾಯುಕ್ತ ಪೊಲೀಸರು ಅವರನ್ನು ಯಶಸ್ವಿಯಾಗಿದ್ದಾರೆ. ಚನ್ನಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಮಾರ್ಚ್‌ 17ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ನಟರಾಜನ್‌ ನೇತೃತ್ವದ ಏಕಸದಸ್ಯ ಪೀಠವು ಇಂದು, ಸೋಮವಾರ ಪ್ರಕಟಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

ಮಾರ್ಚ್‌ 7ರಂದು ಮಾಡಾಳು ವಿರೂಪಾಕ್ಷಪ್ಪ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌ ಸಲ್ಲಿಸಬೇಕು ಹಾಗೂ ಆದೇಶವಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತ್ತು. ನಂತರ ಮಾರ್ಚ್‌ 17ರಂದು ವಾದ-ಪ್ರತಿ ವಾದ ಆಲಿಸಿದ್ದ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು.
ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅವರ ಪರವಾಗಿ ₹ 40 ಲಕ್ಷ ಲಂಚ ಸ್ವೀಕರಿಸಿದ ಆರೋಪದಲ್ಲಿ ಅವರ ಪುತ್ರ ಪ್ರಶಾಂತ ಮಾಡಳು ಅವರು ರೆಡ್‌ ಹ್ಯಾಂಡ್‌ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ನಂತರ ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ₹ 7 ಕೋಟಿಗೂ ಅಧಿಕ ನಗದು ವಶಪಡಿಸಿಕೊಳ್ಳಲಾಗಿತ್ತು.

ಮಾರ್ಚ್ 2 ರಂದು ಪ್ರಕರಣದಲ್ಲಿ ಪ್ರಶಾಂತ ಬಂಧಿತರಾಗಿದ್ದರು. ಆದರೆ ಪ್ರಮುಖ ಆರೋಪಿಯಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಕರ್ನಾಟಕ ಹೈಕೋರ್ಟ್‌ನಿಂದ 5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌ನಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದಿದ್ದರು .
ಮಾರ್ಚ್‌ 7ರಂದು ಮಾಡಾಳು ವಿರೂಪಾಕ್ಷಪ್ಪ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್‌ ಸಲ್ಲಿಸಬೇಕು ಹಾಗೂ ಆದೇಶವಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತ್ತು. ನಂತರ ಮಾರ್ಚ್‌ 17ರಂದು ವಾದ-ಪ್ರತಿ ವಾದ ಆಲಿಸಿದ್ದ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು. ಏಕಸದಸ್ಯ ಪೀಠವು ಇಂದು, ಸೋಮವಾರ ಆದೇಶ ಪ್ರಕಟಿಸಿದ್ದು, ಮಧ್ಯಂತರ ಜಾಮೀನು ವಜಾಗೊಳಿಸಿದೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement