ಮಾನನಷ್ಟ ಮೊಕದ್ದಮೆ: ಖ್ಯಾತ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ನ್ಯಾಯಾಲಯ ಸಮನ್ಸ್

ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್ ಧ್ರುವ ರಾಠಿಗೆ ದೆಹಲಿ ಹೈಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.
ತಮಗೆ ಮಧ್ಯಂತರ ಪರಿಹಾರ ದೊರಕಿಸಿಕೊಡುವಂತೆ ನಖುವಾ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ರಾಠಿ ಅವರಿಗೆ ನೋಟಿಸ್‌ ನೀಡಿದೆ. ಆಗಸ್ಟ್ 6 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ನಖುವಾ ಪರವಾಗಿ ವಕೀಲರಾದ ರಾಘವ ಅವಸ್ಥಿ ಮತ್ತು ಮುಖೇಶ ಶರ್ಮಾ ವಾದ ಮಂಡಿಸಿದರು.
ಹಿಂಸೆಕೋರ, ನಿಂದಕ (Violent & Abusive)ಎಂದು ಕರೆದು ತನ್ನನ್ನು ಟ್ರೋಲ್ ಮಾಡಲಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ಧ್ರುವ ರಾಠಿವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಈಗ ಧ್ರುವ ರಾಠಿಗೆ ನೋಟೀಸ್ ಜಾರಿ ಮಾಡಿದೆ. ಬಿಜೆಪಿಯ ವಕ್ತಾರ ಸುರೇಶ ಕರಮ್ಶಿ ನಖುವಾ ಎಂಬುವವರು ತಮ್ಮ ಇತ್ತೀಚಿನ ವಿಡಿಯೋವೊಂದರಲ್ಲಿ ತನ್ನನ್ನು ಹಿಂಸೆಕೋರ, ನಿಂದಕ ಎಂದು ಟ್ರೋಲ್ ಮಾಡಿದ್ದಾರೆ ಎಂದು ದೂರು ನೀಡಿದ್ದರು.
ತಮ್ಮನ್ನು ‘ಹಿಂಸಾತ್ಮಕ ಮತ್ತು ನಿಂದನಾತ್ಮಕ ಟ್ರೋಲ್‌ಗಳ’ ಗುಂಪಿನ ಭಾಗ ಎಂದು ರಾಠಿ ಕರೆದಿದ್ದಾರೆ ಡಿಜಿಟಲ್‌ ವೇದಿಕೆಗಳಲ್ಲಿ ಅವರ ಹೇಳಿಕೆ ವ್ಯಾಪಕವಾಗಿ ಹಬ್ಬಿದ್ದು ಅವರ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ. ಈ ಆರೋಪಗಳಿಂದಾಗಿ ತಾನು ವ್ಯಾಪಕ ಖಂಡನೆ ಮತ್ತು ಅಪಹಾಸ್ಯಕ್ಕೆ ತುತ್ತಾಗಿದ್ದೇನೆ ಎಂದು ಸುರೇಶ ವಿವರಿಸಿದ್ದಾರೆ.
ಇದು ತನ್ನ ವ್ಯಕ್ತಿತ್ವ ಹರಣಕ್ಕಾಗಿ ಮಾಡಿದ ಉದ್ದೇಶಪೂರ್ವಕ ಪ್ರಚಾರ. ಅವರ ಆರೋಪ ದೂರಗಾಮಿ ಪರಿಣಾಮ ಉಂಟು ಮಾಡುವ ಅಪನಂಬಿಕೆಯ ಬೀಜಗಳನ್ನು ಬಿತ್ತಿದೆ. ಇಂತಹ ಸುಳ್ಳು ಆಪಾದನೆಗಳ ಪರಿಣಾಮ ಬಹುವಿಧವಾಗಿದ್ದು ಇದು ತನಗೆ ಸರಿಪಡಿಸಲಾಗದಂತಹ ಧಕ್ಕೆ ಉಂಟು ಮಾಡಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement