ಬೆಂಗಳೂರು: ರಾನಿ ಚಿತ್ರದ ನಾಯಕ ಹಾಗೂ ಕನ್ನಡತಿ ಧಾರಾವಾಹಿಯ ನಟ ಕಿರಣ ರಾಜ (Kiran Raj) ಪ್ರಯಾಣಿಸುತ್ತಿದ್ದ ಕಾರು ಕೆಂಗೇರಿ ಬಳಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ (Accident) ಸಂಭವಿಸಿದೆ ಎಂದು ಹೇಳಲಾಗಿದೆ. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಿರಣ ರಾಜ ಎದೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಕೆಂಗೇರಿ ಬಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕಿರಣ ರಾಜ ಅಭಿನಯದ ‘ರಾನಿ’ ಸಿನಿಮಾ ಇದೇ ವಾರ ಬಿಡುಗಡೆಯಾಗಬೇಕಿದೆ. ಇದೇ ಸಂದರ್ಭದಲ್ಲಿ ಅವರ ಕಾರು ಅಪಘಾತವಾಗಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ