ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ.
ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.
ರಾಜಕಾರಣದಲ್ಲಿ ಭ್ರಷ್ಟಾಚಾರ, ಕಮಿಷನ್ ದಂಧೆ ಯಾರನ್ನೂ ಬಿಟ್ಟಿಲ್ಲ. ರಾಜಕೀಯದಲ್ಲಿ ಯಾರಲ್ಲೂ ಪ್ರಾಮಾಣಿಕತೆ ಇಲ್ಲ ಎಂದು ಹೇಳಿದ್ದಾರೆ. ಶಾಲಾ ಮಕ್ಕಳಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಅವುಗಳ ನಮ್ಮಂತ ರಾಜಕಾರಣಿಗಳಿಗೆ ಕಮಿಷನ್ ಹೊಡೆಯಲು ಯೋಜನೆಯ ರೂಪಿಸಲಾಗಿದೆ. ಇಂಥ ವೇದಿಕೆಯಲ್ಲಿ ನಾವು ಮಾತನಾಡಬಾರದು. ನಮ್ಮ ಮಾನವನ್ನು ನಾವೇ ಕಳೆದುಕೊಂಡಂತಾಗುತ್ತದೆ ಎಂದು ಹೇಳಿದ್ದಾರೆ.
ನೀವು ಶ್ರೀಗಳ ಜೊತೆಗೆ ನಮ್ಮನ್ನೂ ಗೌರವ ಕೊಟ್ಟು ಕರೆದುಕೊಂಡು ಬರಬೇಡಿ. ನಮ್ಮನ್ನು ಹಿತ್ತಿಲ ಬಾಗಿಲಿನಿಂದ ಕರೆದುಕೊಂಡು ಬನ್ನಿ ಅಷ್ಟರಮಟ್ಟಿಗೆ ರಾಜಕಾರಣಿಗಳು, ರಾಜಕೀಯ ವ್ಯವಸ್ಥೆ ಈಗ ಹದಗೆಟ್ಟು ಹೋಗಿದೆ. ನಾವೆಲ್ಲರೂ ಶುದ್ಧರಿಲ್ಲ, ಪವಿತ್ರ ಇಲ್ಲ ಎಂದು ಅವರು ಬೇಸರ ಹೊರಹಾಕಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ