ಮಳೆ ಮುಂದವರಿಯಲಿದೆ, ದೇಶದಲ್ಲಿ ಸುನಾಮಿ ಬರಬಹುದು, ಜನರು ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ : ಕೋಡಿಮಠದ ಶ್ರೀಗಳ ಭವಿಷ್ಯ

ಮಂಡ್ಯ: ದೇಶ, ವಿದೇಶ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದಂತೆ ಇದಾಗಲೇ ಹಲವಾರು ಬಾರಿ ಭವಿಷ್ಯ ನುಡಿದು ಪ್ರಸಿದ್ಧಿ ಪಡೆದಿರುವ ಕೋಡಿಮಠದ ಶ್ರೀಗಳು ಮಂಡ್ಯದಲ್ಲಿ ಇಂದು, ಶುಕ್ರವಾರ ಭವಿಷ್ಯ ನುಡಿದಿದ್ದಾರೆ. ವರುಣದ ರೌದ್ರಾವತಾರದ ಕುರಿತು ಮಾತನಾಡಿರುವ ಅವರು, ‘ಮಳೆ ಅನಾಹುತ ಇನ್ನೂ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಮಾತನಾಡಿದ ಶ್ರೀಗಳು. ಭೂಮಿಯಿಂದ ಹೊಸ ವಿಷಜಂತುಗಳು ಉದ್ಭವಿಸಲಿವೆ. ಜನರು ಮನೆಯಿಂದ ಹೊರಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ ಎಂದು ಹೇಳಿದ್ದಾರೆ.

ದೇಶಾದ್ಯಂತ ಜಲಪ್ರಳಯ ಎದುರಾಗಲಿದ್ದು, ಸುನಾಮಿ ಸಹ ಉಂಟಾಗಬಹುದು’ ಎಂದು ಹೇಳಿದ್ದಾರೆ. ಈಗ ನೀರೇ ಬೇಡ ಎನ್ನುತ್ತಿದ್ದಾರೆ. ಆದರೆ ಇನ್ನು ಮುಂದಿನ ಕೆಲ ವರ್ಷಗಳಲ್ಲಿ ನೀರಿಗಾಗಿ ಹಾಹಾಕಾರ ಬರಬಹುದು ಎಂದು ಹೇಳಿದ್ದಾರೆ.
ಕೊರೊನಾದ ಬಗ್ಗೆ ಹಿಂದೆ ಹೇಳಿದ್ದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ. ಕೊರೊನಾ ಇನ್ನೊಂದು ವರ್ಷದಲ್ಲಿ ಹೋಗುತ್ತದೆ, ಆದರೆ ಹೋಗುವ ಮೊದಲು ಕಷ್ಟಗಳನ್ನು ಕೊಟ್ಟು ಹೋಗಲಿದೆ’ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಈಗ ಭಗವಂತನ ಪೂಜೆ ಆಡಂಬರವಾಗಿದೆ. ಯೋಗ್ಯ ಸಾಧುಗಳಿದ್ದಾರೆ, ಗದ್ದುಗೆಗಳಿವೆ. ಎಲ್ಲರೂ ಸೇರಿ ಪ್ರಾರ್ಥಿಸಿದರೆ ಶೇ.10ರಷ್ಟು ಪರಿಹಾರ ಸಿಗಲಿದೆ’ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement