ಹೊನ್ನಾವರ : ಶರಾವತಿ ಸೇತುವೆಯಿಂದ ಜಿಗಿದು ಅಪ್ರಾಪ್ತ ಪ್ರೇಮಿಗಳ ಆತ್ಮಹತ್ಯೆ

ಹೊನ್ನಾವರ: ಅಪ್ರಾಪ್ತ ವಯಸ್ಸಿನ ಯುವಕ, ಇನ್ನೊಬ್ಬಳು ಯುವತಿ ಶರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಪ್ರಾಣ ಬಿಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟದಲ್ಲಿ ಶುಕ್ರವಾರ ರಾತ್ರಿ ನಡೆದ ವರದಿಯಾಗಿದೆ. ಇಬ್ಬರ ಶವ ಪತ್ತೆಯಾಗಿದೆ.
ಮೃತರನ್ನು ತುಮಕೂರು ಜಿಲ್ಲೆಯ ನೆಲಹಾಳದ ದೀಲಿಪ ಶಿವರಾಜು ಎನ್. ಬಿ(17) ಮತ್ತು ತುಮಕೂರಿನ ಶೆಟ್ಟಿಹಾಳ ರಸ್ತೆ ಮಾರ್ಗದ ನಿವಾಸಿ ಅಮೂಲ್ಯ ಲೋಕೇಶ (17) ಎಂದು ಗುರುತಿಸಲಾಗಿದೆ. ಯುವತಿಯ ಶವ ಶುಕ್ರವಾರ ರಾತ್ರಿ ಪತ್ತೆಯಾಗಿದೆ ಹಾಗೂ ಯುವಕನ ಶವ ಶನಿವಾರ ಪತ್ತೆಯಾಗಿದೆ.
ರಾತ್ರಿ ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಇಬ್ಬರೂ ಸೇತುವೆ ಮೇಲಿಂದ ನದಿಗೆ ಹಾರಿದ್ದರು ಎಂದು ಹೇಳಲಾಗಿದೆ.
ಹೊನ್ನಾವರ ಸಿ.ಪಿ.ಐ. ಮಂಜುನಾಥ ಇ.ಓ, ಪಿ.ಎಸ್.ಐ. ಪ್ರವೀಣಕುಮಾರ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನದಿಯಲ್ಲಿ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಪತ್ತೆ ಹಚ್ಚಲಾಗಿದೆ.
ಮೃತ ಯುವತಿಯ ಅಣ್ಣ ತೇಜಸ್ ಎಲ್. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇವರಿಬ್ಬರೂ ತುಮಕೂರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಏಪ್ರಿಲ್ 10 ರಂದು ಕಾಲೇಜಿಗೆ ಹೋದವರು ಮರಳಿ ಮನೆಗೆ ಹೋಗದೇ ಧರ್ಮಸ್ಥಳ ಮತ್ತು ಇತರೆ ಸ್ಥಳಗಳಿಗೆ ತೆರಳಿ ಹೊನ್ನಾವರ ಕಡೆಗೆ ಬರುವಾಗ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ‌. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement