ಸೇಲಂ (ತಮಿಳುನಾಡು): ತಮಿಳುನಾಡಿನ ಸೇಲಂನಲ್ಲಿ ವ್ಯಕ್ತಿಯೊಬ್ಬರು ಅನ್ಯಲೋಕದ ದೇವರಿಗಾಗಿ(alien ‘god’) ದೇವಾಲಯವೊಂದನ್ನು ನಿರ್ಮಿಸಿರುವುದಾಗಿ ಹೇಳಿಕೊಂಡಿದ್ದಾರೆ. ಹಾಗೂ ಈ ಅನ್ಯಲೋಕದ ದೇವರಿಗೆ ಭಕ್ತರನ್ನು ನೈಸರ್ಗಿಕ ವಿಕೋಪಗಳಿಂದ ರಕ್ಷಿಸುವ ಶಕ್ತಿ ಇದೆ ಎಂದು ಅವರು ಹೇಳಿದ್ದಾರೆ.
ಸೇಲಂನ ಮಲ್ಲಮೂಪಂಬಟ್ಟಿಯ ಲೋಗನಾಥನ್ ಎಂಬವರು ಸುಮಾರು ಮುಕ್ಕಾಲು ಎಕರೆ ಹರಡಿರುವ ಜಾಗದಲ್ಲಿ ಅನ್ಯಗ್ರಹದ ದೇವರನ್ನು ಪ್ರತಿಷ್ಠಾಪಿಸಿದ್ದಾರೆ. “ನಾನು ಅನ್ಯಗ್ರಹ ಜೀವಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ದೇವಾಲಯವನ್ನು ನಿರ್ಮಿಸಲು ಅವರ ಅನುಮತಿ ಪಡೆದಿದ್ದೇನೆ” ಎಂದು ಲೋಗನಾಥನ್ ಹೇಳುತ್ತಾರೆ. ಅನ್ಯಲೋಕದ ‘ದೇವರು’ ಅಲ್ಲದೆ, ಶಿವ, ಪಾರ್ವತಿ, ಮುರುಗನ್, ಕಾಳಿ ಮುಂತಾದ ದೇವ-ದೇವತೆಗಳ ವಿಗ್ರಹಗಳನ್ನು ಸಹ ನೆಲದಿಂದ 11 ಅಡಿ ಕೆಳಗಿರುವ ನೆಲಮಾಳಿಗೆಯಲ್ಲಿ ಸ್ಥಾಪಿಸಲಾಗಿದೆ.
ಜಗತ್ತಿನಲ್ಲಿ ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವಾಗ, ಅವುಗಳನ್ನು ತಡೆಯುವ ಶಕ್ತಿ ಅನ್ಯಗ್ರಹ ಜೀವಿಗಳಿಗೆ ಇದೆ ಎಂದು ಲೋಗನಾಥನ್ ನಂಬುತ್ತಾರೆ. ಅವರ ನಂಬಿಕೆಯ ಪ್ರಕಾರ, ಏಲಿಯನ್ಗಳು (ಅನ್ಯಗ್ರಹ ಜೀವಿಗಳಳು) ಚಲನಚಿತ್ರಗಳಲ್ಲಿ ತೋರಿಸಿದಂತೆ ಇರುವುದಿಲ್ಲ. ಬಾಳೆ ಎಲೆಯನ್ನು ದೇಹಕ್ಕೆ ಸುತ್ತಿಕೊಂಡರೆ ಅನ್ಯಗ್ರಹ ಜೀವಿಗಳ ವಿಕಿರಣದಿಂದ ಪಾರಾಗಬಹುದು ಎಂಬ ಲೋಗನಾಥನ್ ಹೇಳಿದ್ದಾರೆ.
ಲೋಕನಾಥನು ಅನ್ಯಗ್ರಹ ಜೀವಿಗಳಿಗಾಗಿ ನಿರ್ಮಿಸುತ್ತಿರುವ ದೇಗುಲದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವುದರಿಂದ ಇಲ್ಲಿನ ವಿಶಿಷ್ಟ ದೇವಾಲಯದ ಕುರಿತು ಚರ್ಚೆ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ