ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸರ್ಕಾರ ರಚಿಸಿದ ಸಮಿತಿಯಲ್ಲಿ ಗುಣವಂತೆಯ ಡಾ.ಪರಮೇಶ್ವರ ಪಂಡಿತ

ಹೊನ್ನಾವರ: ಉನ್ನತ ಶಿಕ್ಷಣದಲ್ಲಿ ಪ್ರಮುಖ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- 2020 ಜಾರಿಗೆ ಸರ್ಕಾರ ರಚಿಸಿರುವ ವಿಜ್ಞಾನ ಮತ್ತು ಗಣಿತ ಶಾಸ್ತ್ರ ತಜ್ಞರ ಸಮಿತಿಗೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಗುಣವಂತೆ ಮೂಲದ, ಡಾ. ಪರಮೇಶ್ವರ ವಿ. ಪಂಡಿತ್‌ ಆಯ್ಕೆಯಾಗಿದ್ದಾರೆ.
ಬೆಂಗಳೂರು ನಿವಾಸಿಯಾದ, ಬೆಂಗಳೂರು ವಿಶ್ವವಿದ್ಯಾಲಯದ ಸಂಖ್ಯಾಶಾಸ್ತ್ರದ ಪ್ರಾಧ್ಯಾಪಕರಾಗಿದ್ದಾರೆ.ಸದ್ಯ ಇವರು ಬೆಂಗಳೂರು ವಿಶ್ವವಿದ್ಯಾಲಯದ ಸಂಖ್ಯಾಶಾಸ್ತ್ರ ಅಧ್ಯಯನ ಮಂಡಳಿಯ ಅಧ್ಯಕ್ಷರಾಗಿ ಸೇವ ಸಲ್ಲಿಸುತ್ತಿದ್ದಾರೆ.
ಅಲ್ಲದೆ ಭಾರತದ ಹಲವು ವಿಶ್ವವಿದ್ಯಾಲಯದ ಅಧ್ಯಯನ ಮತ್ತು ನೇಮಕಾತಿ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಣೆ ಮಾಡಿದ್ದಾರೆ.
ಈ ಕ್ಷೇತ್ರದಲ್ಲಿ 85 ಕ್ಕೂ ಹೆಚ್ಚಿನ ಅಧ್ಯಯನ ಲೇಖನ ಮತ್ತು 10 ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ದೇಶ ವಿದೇಶದಲ್ಲಿ ಸಂಖ್ಯಾಶಾಸ್ತ್ರದ ಮೇಲೆ 75 ಕ್ಕೂ ಹೆಚ್ಚಿನ ಉಪನ್ಯಾಸ ನೀಡಿದ್ದಾರೆ.

3.7 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement