ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ : ಆರಂಭಿಕ ಮುನ್ನಡೆ ಕಾಯ್ಡುಕೊಂಡ ಕಾಂಗ್ರೆಸ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಆರಂಭಿಕ ಮತ ಎಣಿಕೆಯಲ್ಲಿ ಕಾಂಗ್ರೆಸ್‌ 112, ಬಿಜೆಪಿ 87, ಜೆಡಿಎಸ್‌ 21, ಇತರರು 02 ಕಡೆಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಆರಂಭಿಕ ಎಣೀಕೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜಗದೀಶ ಶೆಟ್ಟರ, ಕಾಂಗ್ರೆಸ್‌ನ ಆರ್‌.ವಿ.ದೇಶಪಾಂಡೆ, ಶಾಮನೂರು ಶಿವಶಂಕರಪ್ಪ, ದಿನೇಶ ಗುಂಡೂರಾವ್‌, ಬಿಜೆಪಿಯ ರಮೇಶ ಜಾರಕಿಹೊಳಿ, ಸಿ.ಟಿ.ರವಿ, ಸಚಿವರಾದ ಬಿ.ಸಿ.ಪಾಟೀಲ, ಡಾ.ಸುಧಾಕರ ಮೊದಲಾದವರು ಹಿಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೆಡಿಎಸ್‌ನ ಎಚ್‌.ಡಿ.ರೇವಣ್ಣ ಮೊದಲಾದ ಘಟಾನುಘಟಿಗಳು ಹಿಂದಿದ್ದಾರೆ. ಇದು ಆರಂಭಿಕ ಹಂತವಾಗಿದ್ದು, ಹಾಗಾಗಿ ಇದರಿಂದ ಸ್ಪಷ್ಟ ಚಿತ್ರಣ ದೊರಕುವ ಸಾಧ್ಯತೆ ಕಡಿಮೆ.
ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement