ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ದಿನ ಸಮೀಪ: ಮುಂದಿನ ಅಧ್ಯಕ್ಷರ ಬಗ್ಗೆ ಮುಗಿಯದ ಗೊಂದಲ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸನಿಹದಲ್ಲಿದ್ದರೂ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರು ಯಾರು ಎಂಬ ಬಿಕ್ಕಟ್ಟಿಗೆ ಯಾವುದೇ ಪ್ರಗತಿಯ ಲಕ್ಷಣಗಳು ಕಂಡುಬರುತ್ತಿಲ್ಲ.
ಎಐಸಿಸಿ ಅಧ್ಯಕ್ಷ ಪಟ್ಟ ಯಾರು ಅಲಂಕರಿಸುತ್ತಾರೆ ಎಂಬ ಕುತೂಹಲಗಳ ನಡುವೆ ಆಗಸ್ಟ್‌ 21 ಮತ್ತು ಸೆಪ್ಟೆಂಬರ್‌ 20ರ ನಡುವೆ ಚುನಾವಣೆ ನಡೆಸಲು ಕೇಂದ್ರೀಯ ಚುನಾವಣಾ ಪ್ರಾಧಿಕಾರ ಪ್ರಕ್ರಿಯೆ ಆರಂಭಿಸಿದೆ.
ರಾಹುಲ್ ಗಾಂಧಿ ಪಾತ್ರ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವಂತೆ ಮಾಡುವ ಇತ್ತೀಚಿನ ಪ್ರಯತ್ನಗಳು ಫಲಪ್ರದವಾಗಿಲ್ಲ ಎಂದು ಕಾಂಗ್ರೆಸ್‌ ಮೂಲಗಳು ಹೇಳುತ್ತವೆ. 2019 ರ ಸಾರ್ವತ್ರಿಕ ಚುನಾವಣೆಯ ಸೋಲಿನ ನಂತರ ರಾಜೀನಾಮೆ ನೀಡಿದ ನಂತರ ಅವರು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ದೂರ ಇರುವ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಸೋನಿಯಾ ಗಾಂಧಿ ಕೂಡ ತಮ್ಮ ಆರೋಗ್ಯದ ಕಾರಣದಿಂದ ಪುನಃ ಅಧ್ಯಕ್ಷೆಯಾಗುವುದಕ್ಕೆ ಆಸಕತಿ ಹೊಂದಿಲ್ಲ ಎನ್ನಲಾಗಿದೆ.
137 ವರ್ಷಗಳ ಹಳೆಯ ಪಕ್ಷದ ಸದಸ್ಯರು ಇನ್ನೂ ಗಾಂಧಿಯ ಸುತ್ತಲೂ ಒಟ್ಟುಗೂಡಲು ಒಲವು ತೋರುತ್ತಿದ್ದಾರೆ. ಈಗ ಪ್ರಿಯಾಂಕಾ ಗಾಂಧಿ ವಾದ್ರಾ ಅವರತ್ತ ಗಮನ ಹರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ವರ್ಷದ ಉತ್ತರ ಪ್ರದೇಶ ಚುನಾವಣೆಯಲ್ಲಿ ಅವರ ವಿನಾಶಕಾರಿ ದಾಖಲೆಯ ನಂತರ ಅವರ ಸಾಮರ್ಥ್ಯ ಬಗ್ಗೆ ಕೆಲವು ಪ್ರಶ್ನೆಗಳೂ ಎದ್ದಿವೆ.

ಪ್ರಮುಖ ಸುದ್ದಿ :-   ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ಒಮ್ಮತದ ಕೊರತೆಯಿಂದ ಗೊಂದಲಕ್ಕೀಡಾಗಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಳೆಯಿಂದ ಆರಂಭವಾಗಲಿರುವ ವೇಳಾಪಟ್ಟಿ ಅನಿಶ್ಚಿತತೆಯಿಂದ ಕೂಡಿದೆ.
ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ದಾಳಿಯನ್ನು ಮುಂದುವರೆಸಿದ್ದಾರೆ. ಅವರು ಸೆಪ್ಟೆಂಬರ್‌ನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಕನ್ಯಾಕುಮಾರಿಯಿಂದ “ಭಾರತ್ ಜೋಡೋ ಯಾತ್ರೆ” ಪ್ರಾರಂಭಿಸಲಿದ್ದಾರೆ. ನಾವು ರ್ಯಾಲಿಯನ್ನು ಆಯೋಜಿಸುತ್ತಿದ್ದೇವೆ ಮತ್ತು ರಾಹುಲ್ ಗಾಂಧಿ ನೇತೃತ್ವ ವಹಿಸುತ್ತಾರೆ. ಆದರೂ ನಮಗೆ ಅಧ್ಯಕ್ಷೀಯ ಚುನಾವಣೆಗಳ ಬಗ್ಗೆ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಬಗ್ಗೆ ಖಚಿತವಾಗಿಲ್ಲ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕತ್ವದ ಬಿಕ್ಕಟ್ಟು ವರ್ಷಗಳಿಂದ ಹೊಗೆಯಾಡುತ್ತಿದೆ ಮತ್ತು ಅದರ ಬ್ಯಾಕ್-ಟು-ಬ್ಯಾಕ್ ಚುನಾವಣಾ ಸೋಲುಗಳು ಮತ್ತು ಉನ್ನತ ಮಟ್ಟದ ನಾಯಕರ ನಿರ್ಗಮನದ ಸರಣಿಯಿಂದ ಬಿಕ್ಕಟ್ಟು ಮತ್ತಷ್ಟು ಹದಗೆಟ್ಟಿದೆ.
ಮಾರ್ಚ್‌ನಲ್ಲಿ ಪಕ್ಷದ ವಿಧಾನಸಭೆ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಮಾತನಾಡಿದ್ದರು. ಆದರೆ, ಅವರನ್ನುಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆವರೆಗೂ ಇರುವಂತೆ ಮನವೊಲಿಸಲಾಯಿತು. 1998ರಲ್ಲಿ ಸೀತಾರಾಂ ಕೇಸರಿ ಕೊನೆಯ ಬಾರಿಗೆ ಕಾಂಗ್ರೆಸ್‌ನಲ್ಲಿ ಗಾಂಧಿಯೇತರ ಅಧ್ಯಕ್ಷರಾಗಿದ್ದರು.
ಮೇ ತಿಂಗಳಲ್ಲಿ ಉದಯಪುರದಲ್ಲಿ ನಡೆದ ಬೃಹತ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪುನರುಜ್ಜೀವನಕ್ಕಾಗಿ ವಿವರವಾದ ಕಾರ್ಯತಂತ್ರಗಳನ್ನು ಚರ್ಚಿಸಿತು, ಕಾಂಗ್ರೆಸ್ ಹೊಸ ಅಧ್ಯಕ್ಷ ಚುನಾವಣೆಗಯ ಟೈಮ್‌ಲೈನ್‌ಗೆ ಬದ್ಧವಾಗಿದೆ ಎಂದು ಹೇಳುತ್ತಿದೆ.
ಕಾಂಗ್ರೆಸ್ ಅಧ್ಯಕ್ಷರಾಗಿ ಯಾರೇ ಚುನಾಯಿತರಾದರೂ, ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ವಿರುದ್ಧದ ಮೂರನೇ ಘರ್ಷಣೆಗಾಗಿ 2024 ರ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಕಠಿಣ ಕಾರ್ಯವನ್ನು ಎದುರಿಸಬೇಕಾಗುತ್ತದೆ, ಅದರಲ್ಲಿ ಕಾಂಗ್ರೆಸ್‌ ಈಗಾಗಲೇ ಎರಡು ಸೋತಿದೆ.

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ...!

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement