ಲಕ್ನೋ: ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗದೇ ಇದ್ದಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ಅವರಿಗೆ 200 ರೂಪಾಯಿಗಳ ದಂಢ ವಿಧಿಸಿದೆ. ಮತ್ತು ಆ ಮೊತ್ತವನ್ನು ದೂರುದಾರರ ವಕೀಲರಿಗೆ ಪಾವತಿಸುವುದಾಗಿ ಹೇಳಿದೆ ಹಾಗೂ ಮುಂದಿನ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ನಿಗದಿಪಡಿಸಲಾಗಿದೆ.
ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಅಲೋಕ ವರ್ಮಾ ಅವರು ಡಿಸೆಂಬರ್ 2024 ರಲ್ಲಿ ಬುಧವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸೂಚಿಸಿದ್ದರು. ಆದಾಗ್ಯೂ, ಅವರು ಹಾಜರಾಗಿರಲಿಲ್ಲ ಮತ್ತು ಅವರ ಕಾನೂನು ತಂಡವು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿಯನ್ನು ಸಲ್ಲಿಸಿತ್ತು.
ನ್ಯಾಯಾಲಯವು ಅವರಿಗೆ 200 ರೂ.ಗಳನ್ನು ವಿಧಿಸಿತು ಮತ್ತು ದೂರುದಾರರ ವಕೀಲರಿಗೆ ಮೊತ್ತವನ್ನು ಪಾವತಿಸಲಾಗುವುದು ಎಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ನಿಗದಿಪಡಿಸಲಾಗಿದೆ.
ನವೆಂಬರ್ 17, 2022 ರಂದು ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಸಾವರ್ಕರ ಅವರ ಬಗ್ಗೆ ರಾಹುಲ್ ಗಾಂಧಿಯವರು ಮಾಡಿದ ಕಾಮೆಂಟ್ಗಳ ನಂತರ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ರ್ಯಾಲಿಯಲ್ಲಿ ಗಾಂಧಿ ಉದ್ದೇಶಪೂರ್ವಕವಾಗಿ ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಕೀಲ ನೃಪೇಂದ್ರ ಪಾಂಡೆ ದೂರು ಸಲ್ಲಿಸಿದ್ದರು.
ರಾಹುಲ್ ಗಾಂಧಿಯವರ ಹೇಳಿಕೆಗಳು ಸಾವರ್ಕರ್ರನ್ನು ಮಾನನಷ್ಟಗೊಳಿಸುವ ಯೋಜಿತ ಪಿತೂರಿಯ ಭಾಗವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ