ನವದೆಹಲಿ: ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ.
ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 22 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ತ್ರಿಪುರಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಆಗಸ್ಟ್ 26 ರ ವರೆಗೆ, ಬಿಹಾರ, ಹರಿಯಾಣ, ರಾಜಸ್ಥಾನ, ತೆಲಂಗಾಣ ಮತ್ತು ಒಡಿಶಾದ ಅಭ್ಯರ್ಥಿಗಳು ಆಗಸ್ಟ್ 27 ರವರೆಗೆ ಕಾಲಾವಕಾಶವಿದೆ. ಸೆಪ್ಟೆಂಬರ್ 3 ರಂದು ಬೆಳಿಗ್ಗೆ 9 ರಿಂದ 4 ರ ಗಂಟೆ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.
ಅಸ್ಸಾಂನಲ್ಲಿ ಎರಡು, ಬಿಹಾರದಲ್ಲಿ ಎರಡು, ಹರಿಯಾಣದಲ್ಲಿ ಒಂದು, ಮಧ್ಯಪ್ರದೇಶದಲ್ಲಿ ಒಂದು, ಮಹಾರಾಷ್ಟ್ರದಲ್ಲಿ ಎರಡು, ರಾಜಸ್ಥಾನದಲ್ಲಿ ಒಂದು, ತ್ರಿಪುರಾದಲ್ಲಿ ಒಂದು, ತೆಲಂಗಾಣದಲ್ಲಿ ಒಂದು ಮತ್ತು ಒಡಿಶಾದಲ್ಲಿ ಒಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ