ಧಾರವಾಡ: ಎಸ್‌ಡಿಎಂ ಆಸ್ಪತ್ರೆಯಿಂದ ಬೆಳಗಾವಿ ಯುವಕನಿಗೆ ಕಸಿ ಮಾಡಲು ಜಿರೋ ಟ್ರಾಫಿಕ್‌ನಲ್ಲಿ ತೆರಳಿತು ಯುವತಿಯ ಹೃದಯ

ಧಾರವಾಡ: ಮೆದುಳು ನಿಷ್ಕ್ರಿಯಗೊಂಡ ಯುವತಿಯ ಅಂಗಾಂಗಳು ನಾಲ್ಕು ಜನರಿಗೆ ಜೀವದಾನ ಮಾಡಿವೆ. ಇದಕ್ಕಾಗಿ ಝೀರೊ ಟ್ರಾಫಿಕ್ ಮೂಲಕ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಿಂದ ಅಂಗಾಂಗಗಳನ್ನು ಸಾಗಿಸಲಾಯಿತು.
17 ವರ್ಷದ ಹುಡುಗಿ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವಳ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಪ್ರಕಟಿಸಿದರು. ಹೀಗಾಗಿ ಅವಳ ಹೃದಯ ಮತ್ತು ಯಕೃತ್‌ ದಾನ ಮಾಡಲು ಪಾಲಕರು ಒಪ್ಪಿದರು. ಹೃದಯವನ್ನು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನಿಗೆ ನೀಡಲು ಇಲ್ಲಿಂದ ಅಂಬುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು.

ಹಾಗೆಯೇ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಯಕೃತ್ ಕಸಿ ಮಾಡಲಾಗುತ್ತಿದ್ದು, ಅದಕ್ಕಾಗಿ ವಿಮಾನದಲ್ಲಿ ಕೊಂಡೊಯ್ಯಲು ಹುಬ್ಬಳ್ಳಿ ವಿಮಾನ ನಿಲ್ದಾಣವರೆಗೆ ಝೀರೊ ಟ್ರಾಫಿಕ್‌ನಲ್ಲಿ ಅಂಬುಲೆನ್ಸ್‌ನಲ್ಲಿ ಒಯ್ಯಲಾಯಿತು.
ಎರಡು ಮೂತ್ರಪಿಂಡಗಳಲ್ಲಿ ಒಂದು ಎಸ್‌ಡಿಎಂ ಆಸ್ಪತ್ರೆ ಹಾಗೂ ಮತ್ತೊಂದನ್ನು ಹುಬ್ಬಳ್ಳಿಯ ತತ್ವದರ್ಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ಕಸಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಆಸ್ಪತ್ರೆಯಿಂದ ಸೋಮವಾರ ಸಂಜೆ ಸುಮಾರು 4:30ರ ಹೊತ್ತಿಗೆ ಹೊರಟ ಅಂಬುಲೆನ್ಸ್‌ಗಳು ಸಾಗುವ ಮಾರ್ಗದಲ್ಲಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement