ಬೆಂಗಳೂರು : ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಿಜೆಪಿ ಶಾಸಕ ಬೈರತಿ ಬಸವರಾj ಅವರನ್ನು ಅಹಮದಾಬಾದ್ನಿಂದ ಆಗಮಿಸಿದ ಬೆನ್ನಲ್ಲೇ, ಗುರುವಾರ ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಟರ್ಮಿನಲ್-1ರಲ್ಲಿ ಅವರ ಆಗಮನಕ್ಕಾಗಿ ಕಾಯುತ್ತಿದ್ದ ಪೊಲೀಸ್ ತಂಡವು ಅವರನ್ನು ವಶಕ್ಕೆ ತೆಗೆದುಕೊಂಡಿದೆ.
ಕೆ.ಆರ್. ಪುರಂ ಶಾಸಕರನ್ನು ಸಂಜೆ 7 ಗಂಟೆ ಸುಮಾರಿಗೆ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ತಂಡ ಅವರನ್ನು ವಶಕ್ಕೆ ಪಡೆದಿದ್ದು, ಮುಂದಿನ ಪ್ರಕ್ರಿಯೆಗಳಿಗಾಗಿ ಪ್ಯಾಲೇಸ್ ರಸ್ತೆಯಲ್ಲಿರುವ ಏಜೆನ್ಸಿಯ ಪ್ರಧಾನ ಕಚೇರಿಗೆ ಕರೆದೊಯ್ಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜು ಅವರು ಬಂಧನದ ಭೀತಿಯಲ್ಲಿ ತಲೆಮರೆಸಿಕೊಂಡಿದ್ದರು. ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ್ದರು.
ರೌಡಿಶೀಟರ್ ಆಗಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ನಡೆದಿದೆ.
ಪ್ರಕರಣದ ವಿವರ
2025ರ ಜುಲೈ 15ರಂದು ನಗರದ ಭಾರತಿ ನಗರದಲ್ಲಿ ಹತ್ಯೆಗೀಡಾದ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವು (40) ಎಂಬವರ ಕೊಲೆಗೆ ಈ ಪ್ರಕರಣ ಸಂಬಂಧಿಸಿದೆ. ಈ ಪ್ರಕರಣದ ಎಫ್ಐಆರ್ನಲ್ಲಿ ಬಸವರಾಜ ಅವರನ್ನು 5ನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ