ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಶಿಕ್ಷಕರು…!

ರಾಮನಗರ: ಶಾಲೆಯ ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಘಟನೆಯ ನಂತರ ಶಾಲೆಯ ಮುಂದೆ ಪೋಷಕರು ಗಲಾಟೆ ನಡೆಸಿದ್ದಾರೆ. ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ಎಂಟನೇ ತರಗತಿಯಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಶುಕ್ರವಾರ ನಡೆದಿರುವ ಘಟನೆ ನಡೆದಿದೆ ಎನ್ನಲಾಗಿದ್ದು, ವಿದ್ಯಾರ್ಥಿನಿಯರು ಮನೆಗೆ ಬಂದ ನಂತರ ತಮ್ಮ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಪೋಷಕರು, ಶನಿವಾರ ಬೆಳಗ್ಗೆ ಶಾಲೆಗೆ ಆಗಮಿಸಿ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದ ಶಾಲೆಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರ ಪೊಲೀಸರಿಗೆ ತಿಳಿದು ಪೊಲೀಸರು ಶಾಲೆಗೆ ಆಗಮಿಸಿದ್ದಾರೆ. ನಂತರ ವಿಷಯ ತಿಳಿದ ಕ್ಷೇತ್ರದ ಶಿಕ್ಷಣಾಧಿಕಾರಿಗಳು ಶಾಲೆಗೆ ಆಗಮಿಸಿ ಘಟನೆ ಬಗ್ಗೆ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದಿದ್ದಾರೆ.
ತರಗತಿ ನಡೆಯುತ್ತಿರುವಾಗಲೇ ವಿದ್ಯಾರ್ಥಿನಿಯರಿಗೆ ಈ ಶಿಕ್ಷೆ ಕೊಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಲೆಯಲ್ಲಿ ಎರಡು ಜಡೆಗಳನ್ನು ಹಾಕಿಕೊಂಡು ಬರಬೇಕೆಂಬ ನಿಯಮವಿದೆ. ಆದರೆ, ಈ ಮೂವರು ವಿದ್ಯಾರ್ಥಿನಿಯರು ಬೆಳಗ್ಗೆ ಹೊತ್ತು ಅವರಿಗೆ ಸಮಯ ಸಾಕಾಗದೇ ಇದ್ದಿದ್ದರಿಂದ ಒಂದು ಜಡೆಯಲ್ಲೇ ಶಾಲೆಗೆ ಬಂದಿದ್ದಕ್ಕೆ ಹೀಗೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement