ಕಾರು ಹರಿದು ಒಂದೂವರೆ ವರ್ಷದ ಮಗು ಸಾವು

ಬೀದರ : ನಗರದ ಹಾರೂರಗೇರಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆ ಎದುರುಗಡೆ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಕಾರು ಹರಿದು ಮಗು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತ ಬಾಲಕನನ್ನು ಸಂಗೀತಾ ಹಾಗೂ ಸತೀಷ ಪಾಟೀಲ ದಂಪತಿ ಪುತ್ರ ಬಸವಚೇತನ ಎಂದು ಗುರುತಿಸಲಾಗಿದೆ. ಕಾರು ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತ ಕಾರು ಚಲಾಯಿಸಸುತ್ತಿದ್ದ, ಹೀಗಾಗಿ ಮಗುವಿನ ಮೇಲೆ ಕಾರು ಹರಿದ ವಿಷಯ ಆತನಿಗೆ ಗೊತ್ತಾಗಿರಲಿಲ್ಲ ಎನ್ನಲಾಗಿದೆ ಎಂದು ವರದಿಗಳು ಹೇಳಿವೆ. ಆದರೆ ಪಕ್ಕದಲ್ಲೇ ನಿಂತಿದ್ದ ಇನ್ನೊಂದು ಕಾರಿನ ಚಾಲಕ ಘಟನೆ ನೋಡಿದ್ದಾನೆ ಎನ್ನಲಾಗಿದ್ದು, ತಕ್ಷಣವೇ ಮಗುವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆದರೆ ಮಗು ಅಷ್ಟರೊಳಗಾಗಲೇ ಮೃತಪಟ್ಟಿತ್ತು ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಪಟ್ಟಂತೆ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement