ಮನೆಗೆ ಬೆಂಕಿ ತಗುಲಿ 6 ಮಂದಿ ಸಜೀವ ದಹನ

ಹೈದರಾಬಾದ್‌: ತೆಲಂಗಾಣದ ಮಂಚಾರ್ಯಾಲಾ ಜಿಲ್ಲೆಯಲ್ಲಿ ಶನಿವಾರ ಮನೆಯೊಂದರಲ್ಲಿ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಆರು ಸದಸ್ಯರು ದಹನಗೊಂಡಿದ್ದಾರೆ.
ಅಪಘಾತದಲ್ಲಿ ಮನೆ ಮಾಲೀಕ ಶಿವಯ್ಯ (50), ಪತ್ನಿ ಪದ್ಮಾ (45), ಪದ್ಮಾ ಅವರ ಅಕ್ಕನ ಮಗಳು ಮೌನಿಕಾ (23) ಮತ್ತು ಅವರ ಇಬ್ಬರು ಪುತ್ರಿಯರು ಸಾವಿಗೀಡಾಗಿದ್ದಾರೆ.ಮಂದಮರಿ ಸರ್ಕಲ್ ಇನ್ಸ್‌ಪೆಕ್ಟರ್ ಆಫ್ ಪೊಲೀಸ್ ಪ್ರಮೋದ್ ಕುಮಾರ್ ಮಾತನಾಡಿ, ತೆಲಂಗಾಣದ ಮಂದಮರ್ರಿ ಮಂಡಲದ ವೆಂಕಟಾಪುರದ ಮನೆಯಲ್ಲಿ ಶಿವಯ್ಯ ಮತ್ತು ಅವರ ಪತ್ನಿ ಪದ್ಮಾ ವಾಸವಾಗಿದ್ದರು. ಎರಡು ದಿನಗಳ ಹಿಂದೆ ಪದ್ಮಾ ಅವರ ಅಕ್ಕನ ಮಗಳು ಮೌನಿಕಾ, ಇಬ್ಬರು ಹೆಣ್ಣುಮಕ್ಕಳು ಮತ್ತು ಶಾಂತಯ್ಯ ಎಂಬ ಮಹಿಳೆ ಆಗಮಿಸಿದ್ದರು. ರಾತ್ರಿ 12:00 ರಿಂದ 12:30ರ ನಡುವೆ ಅವರ ಮನೆಯಲ್ಲಿ ದೊಡ್ಡ ಬೆಂಕಿ ಹೊತ್ತಿಕೊಂಡಿರುವುದನ್ನು ನೆರೆಹೊರೆಯವರು ಗಮನಿಸಿದ್ದಾರೆ ಎಂದು ಕುಮಾರ ಹೇಳಿದರು.
ಕೂಡಲೇ ಗ್ರಾಮಸ್ಥರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ತಲುಪುವಷ್ಟರಲ್ಲಿ ಇಡೀ ಮನೆಗೆ ಬೆಂಕಿ ಬಿದ್ದಿತ್ತು. ಮಾಹಿತಿಯ ಪ್ರಕಾರ, ಮನೆಯಲ್ಲಿದ್ದ ಒಟ್ಟು ಆರು ಸದಸ್ಯರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಂಕಿ ಅನಾಹುತಕ್ಕೆ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| 'ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ' ಎಂದ ಕಾಂಗ್ರೆಸ್‌ ಹಿರಿಯ ನಾಯಕ...! ಟಿಎಂಸಿ ಕೆಂಡ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement