ಮನೆಗೆ ನೀರು ನುಗ್ಗಿದ ಸುದ್ದಿ ಕೇಳಿ ವ್ಯಕ್ತಿ ಹೃದಯಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದ ಉಪ್ಪಾರಗಲ್ಲಿಯಲ್ಲಿ ದಶರಥ ಬಂಡಿ(80)ಎಂಬವರು ತಮ್ಮ ಮನೆಗೆ ಮಳೆ ನೀರು ನುಗ್ಗಿರುವ ವಿಷಯ ತಿಳಿದು ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಹೊತ್ತು ಮನೆಗೆ ಮಳೆ ನೀರು ಬಂದಿರುವ ವಿಷಯ ತಿಳಿದ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಘಟಪ್ರಭಾ ನದಿಯಿಂದ ಪ್ರವಾಹ ಬಂದು ಎಲ್ಲರೂ ಮನೆ ಖಾಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳುತ್ತಿದ್ದಂತೆ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ದಶರಥ ಅವರ ಅಂತ್ಯಸಂಸ್ಕಾರ ಮುಗಿಸಿ ಮನೆಯವರು ತಮ್ಮ ಮನೆಗೆ ವಾಪಸಾಗುವಾಗ ಮನೆಯೂ ಮುಳುಗಿದೆ. ರಾತ್ರೋರಾತ್ರಿ ಕುಟುಂಬಸ್ಥರು ಮನೆ ಬಿಟ್ಟು ಹೊರಗೆ ಬಂದಿದ್ದಾರೆ. ಇದೀಗ ದಶರಥ ಬಂಡಿ ಅವರ ಕುಟುಂಬಸ್ಥರು, ಮಕ್ಕಳು, ಸಾಕು ಪ್ರಾಣಿಗಳ ಜೊತೆಗೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದಾರೆ

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement