ಕರ್ನಾಟಕದಲ್ಲಿ ಇಳಿಕೆಯತ್ತ ಕೊರೊನಾ ಸೋಂಕು..ಮಂಗಳವಾರ 14,366 ಹೊಸ ಸೋಂಕು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಇಂದು, ಮಂಗಳವಾರ ಒಟ್ಟು 14,366 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇವೇಳೆ 58 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹಾಗೂ ರಾಜ್ಯದಲ್ಲಿ ಒಟ್ಟು 60,914 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ವಿಜಯಪುರದಲ್ಲಿ 7 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸಕಾರಾತ್ಮಕ ದರ 13.45%ಕ್ಕೆ ಇಳಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 38,23,833 ಮಂದಿಗೆ ಕೊರೊನಾ ಬಂದಿದೆ. ಒಟ್ಟು 35,87,022 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.40 ರಷ್ಟಿದೆ.
ಬೆಂಗಳೂರಿನಲ್ಲಿ ಒಟ್ಟು 6,685 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 9 ಮರಣ ಪ್ರಕರಣ ವರದಿಯಾಗಿದೆ.
ಜಿಲ್ಲಾವಾರು ಸೋಂಕಿನ ಮಾಹಿತಿ..
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕು ಇಳಿಕೆ ಕಾಣುತ್ತಿದೆ. ಮಂಗಳವಾರ ಬಾಗಲಕೋಟೆ 165, ಬಳ್ಳಾರಿ 437, ಬೆಳಗಾವಿ 1,081, ಬೆಂಗಳೂರು ಗ್ರಾಮಾಂತರ 117, ಬೆಂಗಳೂರು ನಗರ 6,685, ಬೀದರ್ 115, ಚಾಮರಾಜನಗರ 87, ಚಿಕ್ಕಬಳ್ಳಾಪುರ 126, ಚಿಕ್ಕಮಗಳೂರು 154, ಚಿತ್ರದುರ್ಗ 252, ದಕ್ಷಿಣ ಕನ್ನಡ 322, ದಾವಣಗೆರೆ 126, ಧಾರವಾಡ 633, ಗದಗ 73, ಹಾಸನ 337, ಹಾವೇರಿ 130, ಕಲಬುರಗಿ 135, ಕೊಡಗು 205, ಕೋಲಾರ 169, ಕೊಪ್ಪಳ 99, ಮಂಡ್ಯ 211, ಮೈಸೂರು 777, ರಾಯಚೂರು 38, ರಾಮನಗರ 58, ಶಿವಮೊಗ್ಗ 325, ತುಮಕೂರು 573, ಉಡುಪಿ 230, ಉತ್ತರ ಕನ್ನಡ 551, ವಿಜಯಪುರ 81 ಮತ್ತು ಯಾದಗಿರಿಯಲ್ಲಿ 74 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರು ಹಿರಿಯ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement