ನವದೆಹಲಿ: ಕಾಂಗ್ರೆಸ್ ಹೈ ಕಮಾಂಡ್ ಸೋಮವಾರ ಚುನಾವಣೆ ನಡೆಯಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ.
ಅಧಿಕೃತ ಪ್ರಕಟಣೆಯ ಪ್ರಕಾರ, ರಾಜಸ್ಥಾನಕ್ಕೆ ಮಧುಸೂಧನ ಮಿಸ್ತ್ರಿ ಅವರನ್ನು ಹಿರಿಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರನ್ನು ಮಧ್ಯಪ್ರದೇಶದ ಹಿರಿಯ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಹಾಗೂ ಚಂದ್ರಕಾಂತ ಹಂದೋರೆ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಉತ್ತರಾಖಂಡ್ ಪ್ರದೇಶ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಪ್ರೀತಮ್ ಸಿಂಗ್ ಅವರನ್ನು ಛತ್ತೀಸ್ಗಢದ ಹಿರಿಯ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಮೀನಾಕ್ಷಿ ನಟರಾಜನ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.
ತೆಲಂಗಾಣಕ್ಕೆ ದೀಪಾ ದಾಸ್ ಮುನ್ಶಿ ಅವರನ್ನು ಹಿರಿಯ ವೀಕ್ಷಕರನ್ನಗಿ ಹಾಗೂ ಸಿರಿವೆಲ್ಲ ಪ್ರಸಾದ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ, ಮಿಜೋರಾಂಗೆ ಸಚಿನ್ ರಾವ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.
ಈ ಐದು ರಾಜ್ಯಗಳ ವಿಧಾನಸಭೆಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಪ್ರಸ್ತುತ ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಎರಡು ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಪ್ರಯತ್ನ ನಡೆಸುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ