ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್ ಇಂಡಿಯಾ ಎಕ್ಸಪ್ರೆಸ್ ಜನವರಿ 17ರಿಂದ ಬೆಂಗಳೂರು ಮತ್ತು ಕೋಲ್ಕತ್ತಾದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.
ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜನವರಿ 17 ರಂದು ಬೆಳಿಗ್ಗೆ 8:05 ಕ್ಕೆ ಹೊರಟು 10:35 ಕ್ಕೆ ಅಯೋಧ್ಯೆ ತಲುಪಲಿದೆ. ಅದೇ ರೀತಿ ಹಿಂತಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3:40 ಕ್ಕೆ ಹೊರಡಲಿದ್ದು, ಸಂಜೆ 6:10 ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿದು ಬಂದಿದೆ
ಅದೇ ರೀತಿ ಅಯೋಧ್ಯೆ-ಕೋಲ್ಕತ್ತಾ ಮಾರ್ಗದ ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11: 05 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12: 50 ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್ ಆಗಲಿದೆ. ಕೋಲ್ಕತ್ತಾ-ಅಯೋಧ್ಯೆ ವಿಮಾನವು ಕೋಲ್ಕತ್ತಾದಿಂದ ಮಧ್ಯಾಹ್ನ 1:25 ಕ್ಕೆ ಹೊರಡಲಿದ್ದು, ಮಧ್ಯಾಹ್ನ 3:10 ಕ್ಕೆ ಅಯೋಧ್ಯೆ ತಲುಪಲಿದೆ.
ಅಯೋಧ್ಯೆ, ಬೆಂಗಳೂರು, ಕೋಲ್ಕತ್ತಾ ನಡುವೆ ವಾರಕ್ಕೆ ಮೂರು ತಡೆರಹಿತ, ನೇರ ವಿಮಾನ ಯಾನ ಇರಲಿದೆ. ಇದರ ವೇಳಾಪಟ್ಟಿ ಮತ್ತು ಬುಕ್ಕಿಂಗ್ ವ್ಯವಸ್ಥೆ ಏರ್ ಇಂಡಿಯಾ ಎಕ್ಸ್ಪ್ರೆಸ್ನ ವೆಬ್ಸೈಟ್ (airindiaexpress.com), ಅಪ್ಲಿಕೇಶನ್ ಲಭ್ಯವಿದೆ ಎಂದು ಕಂಪನಿ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ