ವಿಜಯನಗರ: ಯಡಿಯೂರಪ್ಪನವರು ರಾಜೀನಾಮೆ ಬಳಿಕ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಕೇವಲ ೬ ರಿಂದ ೭ ತಿಂಗಳು ಮಾತ್ರ ಸಿಎಂ ಹುದ್ದೆಯಲ್ಲಿರಲಿದ್ದಾರೆ. ಬಳಿಕ ಗಡ್ಡದಾರಿ ವ್ಯಕ್ತಿಯೊಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಧರ್ಮಕರ್ತರು ಭವಿಷ್ಯ ನುಡಿದಿದ್ದಾರೆ.
ಈಗಾಗಲೇ ರಾಜ್ಯ ರಾಜಕೀಯ, ನೆರೆ, ಪ್ರವಾಹ ಕುರಿತಂತೆ ಸ್ಪೋಟಕ ಭವಿಷ್ಯವನ್ನು ಕೋಡಿ ಮಠದ ಶ್ರೀಗಳು ನುಡಿದಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಕುರಿತು ಮೈಲಾರಲಿಂಗೇಶ್ವರ ಭವಿಷ್ಯವಾಣಿ ನುಡಿದಿದ್ದಾರೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಧರ್ಮಕರ್ತರು, ಇಂದು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಭವಿಷ್ಯವಾಣಿ ನುಡಿದಿದ್ದು, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ೬ ರಿಂದ ೭ ತಿಂಗಳು ಮಾತ್ರವೇ ಮುಖ್ಯಮಂತ್ರಿಯಾಗಿ ಕೆಲಸ ಮಾಡಬಹುದು. ಮಾರ್ಚ್ ವೇಳೆಗೆ ರಾಜ್ಯದಲ್ಲಿ ಗಡ್ಡಧಾರಿ ವ್ಯಕ್ತಿಯೊಬ್ಬರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಈಗಾಗಲೇ ಭವಿಷ್ಯವಾಣಿಗೆ ಪ್ರತಿಕ್ರಿಯಿಸಿ ನಾನಂತೂ ಮುಖ್ಯಮಂತ್ರಿಯಾಗಲು ಗಡ್ಡ ಬಿಟ್ಟಿಲ್ಲ ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ