ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಬೆಂಗಳೂರು : ಹೈದರಾಬಾದ್-ಬೆಂಗಳೂರು ʼವಂದೇ ಭಾರತʼ ರೈಲಿನ ವಾಣಿಜ್ಯ ಕಾರ್ಯಾಚರಣೆ ಸೆಪ್ಟೆಂಬರ್ 25 (ಸೋಮವಾರ)ರಿಂದ ಪ್ರಾರಂಭವಾಗಲಿದೆ. ಅರೆ-ಹೈ-ಸ್ಪೀಡ್ ರೈಲು ಎರಡು ಮಹಾನಗರಗಳ ನಡುವೆ ಸುಮಾರು ಎರಡು ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್-ಬೆಂಗಳೂರು ವಂದೇ ಭಾರತ್ ರೈಲನ್ನು ಭಾನುವಾರ ವರ್ಚುವಲ್‌ನಲ್ಲಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಯಶವಂತಪುರದಿಂದ ಹೈದರಾಬಾದ್‌ನ ಕಾಚೆಗುಡಕ್ಕೆ ಕಾರ್ಯಾಚರಣೆ ನಡೆಸಲು … Continued

2023 : ಟೈಮ್ ಮ್ಯಾಗಜೀನ್‌ ವಿಶ್ವದ ಟಾಪ್‌-100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಭಾರತದ ಇನ್ಫೋಸಿಸ್ ಗೆ ಮಾತ್ರ ಸ್ಥಾನ ; ವಿಶ್ವದ ಟಾಪ್‌- 10 ಕಂಪನಿಗಳ ಪಟ್ಟಿ…

ನವದೆಹಲಿ: 2023ರ ಟೈಮ್ ಮ್ಯಾಗಜೀನ್‌ನ ವಿಶ್ವದ ಅತ್ಯುತ್ತಮ ಅಗ್ರ 100 ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್‌ (Infosys) ಮಾತ್ರ ಸ್ಥಾನ ಪಡೆದ ಭಾರತದ ಏಕೈಕ ಕಂಪನಿಯಾಗಿದೆ. ಬೆಂಗಳೂರು ಮೂಲದ ಜಾಗತಿಕ ಸಲಹಾ ಮತ್ತು ಐಟಿ (IT) ಸೇವೆಗಳ ಕಂಪನಿಯು ಒಟ್ಟಾರೆ 88.38 ಅಂಕಗಳೊಂದಿಗೆ 64ನೇ ಸ್ಥಾನದಲ್ಲಿದೆ. ನಾವು ಟಾಪ್ 3 ಜಾಗತಿಕ ವೃತ್ತಿಪರ ಸೇವಾ ಸಂಸ್ಥೆಗಳಲ್ಲಿದ್ದೇವೆ ಮತ್ತು … Continued

19-ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ….

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೇಶಾದ್ಯಂತ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿವೆ. ದೆಹಲಿಯಲ್ಲಿ 100 ರೂಪಾಯಿ ಸಮೀಪ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಇತರ ಮಹಾನಗರಗಳಲ್ಲಿ ಸುಮಾರು 93 ರೂಪಾಯಿಗಳ ಕಡಿತವನ್ನು ಮಾಡಲಾಗಿದೆ. ಈಗ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ 1680 ರೂ.ಗಳಿಗೆ ಲಭ್ಯವಿರುತ್ತದೆ, ಇದುವರೆಗೆ 1780 ರೂ.ಗಳ ದರವಿತ್ತು. ಈ … Continued

ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟ: ಜೂನ್‌ 6ರಿಂದ ಶಿಕ್ಷಕರ ವರ್ಗಾವಣೆ ಆರಂಭ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಜೂನ್‌ 6 ರಿಂದ ಜುಲೈ 31 ರವರೆಗೆ ನಡೆಯಲಿದೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಮೇ … Continued

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಜೂನ್ 12ರಿಂದ ಪರೀಕ್ಷೆ ಆರಂಭವಾಗಲಿದ್ದು, 19ರವರೆಗೆ ನಡೆಯಲಿದೆ. ಪರೀಕ್ಷೆ ಬೆಳಿಗ್ಗೆ ಬೆಳಗ್ಗೆ 10:0 ರಿಂದ ಮಧ್ಯಾಹ್ನ 1:45 ರವರೆಗೆ ಬಹುತೇಕ ಎಲ್ಲಾ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ … Continued

ಸಿದ್ದರಾಮಯ್ಯ -ಶಿವಕುಮಾರ ಜೊತೆ 8 ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ : ಇಲ್ಲಿದೆ ಸಚಿವರ ಪಟ್ಟಿ

ಬೆಂಗಳೂರು :ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, … Continued

ಎಸ್ ಎಸ್ ಎಲ್‌ ಸಿ ಪೂರಕ ಪರೀಕ್ಷೆ ನೋಂದಣಿಗೆ ಕೊನೆಯ ದಿನಾಂಕ ವಿಸ್ತರಣೆ

ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಗೆ ನೋಂದಾಯಿಸಲು ಹಾಗೂ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಕೊನೆಯ ದಿನಾಂಕವನ್ನು ಮೇ 18ರ ವರೆಗೆ ವಿಸ್ತರಿಸಲಾಗಿದೆ. 2023ನೇ ಜೂನ್ ನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ … Continued

ಎಸ್ಸೆಸ್ಸೆಲ್ಸಿ : ರಾಜ್ಯದಲ್ಲಿ ಶೇ.83.89ರಷ್ಟು ಫಲಿತಾಂಶ, 100ಕ್ಕೆ ನೂರು ಫಲಿತಾಂಶ ಪಡೆದ 4 ವಿದ್ಯಾರ್ಥಿಗಳು, ಚಿತ್ರದುರ್ಗ ಜಿಲ್ಲೆ ಪ್ರಥಮ-ಯಾದಗಿರಿಗೆ ಕೊನೆಯ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ 8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ವರ್ಷದ ಫಲಿತಾಂಶ ಶೇ.83.89ರಷ್ಟಾಗಿದೆ. ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಪಡೆದಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, … Continued

ಇಂದಿನಿಂದ ಭಕ್ತರ ದರ್ಶನಕ್ಕೆ ತೆರೆದ ಬದರೀನಾಥ ದೇವಸ್ಥಾನ : 15 ಕ್ವಿಂಟಾಲ್ ಹೂಗಳಿಂದ ದೇಗುಲಕ್ಕೆ ಸಿಂಗಾರ | ವೀಕ್ಷಿಸಿ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇರುವ ಬದರೀನಾಥ ದೇಗುಲ ಇಂದು, ಗುರುವಾರ (ಏಪ್ರಿಲ್‌ 27) ಬೆಳಿಗ್ಗೆ 7:10 ಕ್ಕೆ ಧಾರ್ಮಿಕ ವಿಧಿ ವಿಧಾನಗಳು ನಡೆದ ನಂತರ ಭಕ್ತರಿಗೆ ತೆರೆಯಲಾಯಿತು. ಚಳಿಗಾಲದ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಬದರೀನಾಥ ದೇಗುಲದ ಬಾಗಿಲುಗಳನ್ನು ಮಂತ್ರಘೋಷಗಳೊಂದಿಗೆ ತೆರೆಯಲಾಯ್ತು. ಇಂದು, ಗುರುವಾರ ದೇಗುಲದ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನು 15 ಕ್ವಿಂಟಲ್ ವಿವಿಧ … Continued

ಈ ವರ್ಷ ದೇಶದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಯಾಗಬಹುದು: ಸ್ಕೈಮೆಟ್ ಮುನ್ಸೂಚನೆ | ಎಲ್ಲೆಲ್ಲಿ ಮಳೆ ಕಡಿಮೆ?

ನವದೆಹಲಿ : ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಿರ್ಣಾಯಕ ಮಾನ್ಸೂನ್ ತಿಂಗಳುಗಳಲ್ಲಿ ಭಾರತವು ಮಳೆಯ ಕೊರತೆ ಕಾಣುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಮುನ್ಸೂಚಕ ಸ್ಕೈಮೆಟ್ ತಿಳಿಸಿದೆ. ಸ್ಕೈಮೆಟ್ ಪ್ರಕಾರ, ಮಾನ್ಸೂನ್ ನಾಲ್ಕು ತಿಂಗಳ ಅವಧಿಯಲ್ಲಿ ದೀರ್ಘಾವಧಿಯ ಸರಾಸರಿ (ಎಲ್‌ಟಿಎ) ಮಳೆಯ 94 ಪ್ರತಿಶತದಷ್ಟು ಇರುತ್ತದೆ. ಅದು 96 ಮತ್ತು 104 ಪ್ರತಿಶತದ ನಡುವೆ ಇರುವಾಗ ಅದನ್ನು ಸಾಮಾನ್ಯ … Continued