ಈ ಸಲದ ಚುನಾವಣೆಯಲ್ಲಿ ಬಿಜೆಪಿ ಗೆದ್ದಷ್ಟು ಸ್ಥಾನಗಳನ್ನು ಮೂರು ಚುನಾವಣೆ ಸೇರಿಸಿದ್ರೂ ಕಾಂಗ್ರೆಸ್ಸಿಗೆ ಗೆಲ್ಲಲು ಸಾಧ್ಯವಾಗಿಲ್ಲ : ಮೋದಿ ಲೇವಡಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಸ್ಥಾನಗಳಷ್ಟನ್ನು ಕಾಂಗ್ರೆಸ್‌ ಮೂರು ಚುನಾವಣೆಗಳನ್ನು ಸೇರಿಸಿದರೂ ಅದಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ 100 ಸ್ಥಾನಗಳ ಗಡಿ ದಾಟಲು ವಿಫಲವಾಗಿದ್ದು, ಕಳೆದ ಮೂರು ಚುನಾವಣೆಗಳಲ್ಲಿ ಗೆದ್ದಿದ್ದನ್ನು ಸೇರಿಸಿದರೂ ಅದು ಬಿಜೆಪಿ ಒಂದು ಚುನಾವಣೆಯಲ್ಲಿ ಗೆದ್ದಷ್ಟು ಸ್ಥಾನಗಳಷ್ಟು ಆಗುವುದಿಲ್ಲ ಎಂದು … Continued

ʼಅಗ್ನಿವೀರʼ ಯೋಜನೆ ಮರುಪರಿಶೀಲಿಸುವಂತೆ ಎನ್‌ಡಿಎ ಸರ್ಕಾರ ರಚನೆಗೆ ಮೊದಲೇ ಜೆಡಿಯು ಒತ್ತಾಯ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯು ಮೊದಲ ಎರಡಕ್ಕಿಂತ ಭಿನ್ನವಾಗಿರಬಹುದು ಎಂಬ ಮೊದಲ ಸಂಕೇತವಾಗಿ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ ಯೋಜನೆಯನ್ನು ಮರುಪರಿಶೀಲಿಸಲು ಪಕ್ಷವು ಬಯಸುತ್ತದೆ ಎಂದು ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಜೆಡಿಯುನ ಮುಖ್ಯ ವಕ್ತಾರ ಕೆ.ಸಿ. ತ್ಯಾಗಿ, ಹಲವಾರು ರಾಜ್ಯಗಳಲ್ಲಿ ಯೋಜನೆಯ ವಿರುದ್ಧ ಅಸಮಾಧಾನವಿದೆ ಎಂದು ಹೇಳಿದ್ದಾರೆ. … Continued