ಆಪರೇಷನ್ ಕಾವೇರಿ : ಸುಡಾನ್​ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ 362 ಕನ್ನಡಿಗರು

ನವದೆಹಲಿ: ಕಲಹ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯಡಿ ಶುಕ್ರವಾರ 754 ಜನರನ್ನು ಭಾರತಕ್ಕೆ ಕರೆತರಲಾಗಿದೆ. ಭಾರತೀಯ ವಾಯುಪಡೆಯ C-17 ಹೆವಿ-ಲಿಫ್ಟ್ ವಿಮಾನದಲ್ಲಿ 392 ಜನರು ನವದೆಹಲಿಗೆ ಆಗಮಿಸಿದರೆ, 362 ಭಾರತೀಯರ ಮತ್ತೊಂದು ಬ್ಯಾಚ್ ಅನ್ನು ಬೆಂಗಳೂರಿಗೆ ಕರೆತರಲಾಯಿತು. ಅಧಿಕೃತ ಮಾಹಿತಿಯ ಪ್ರಕಾರ, ದೇಶಕ್ಕೆ ಕರೆತಂದ ಒಟ್ಟು ಭಾರತೀಯರ ಸಂಖ್ಯೆ ಈಗ 1,360 ಆಗಿದೆ. … Continued