ರಂಜಿತ್ ಸಿಂಗ್ ಕೊಲೆ ಪ್ರಕರಣ: ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಬಾಬಾ ಗುರ್ಮಿತ್ ರಾಮ್ ರಹೀಂ, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ಧಾರ್ಮಿಕ ಕೇಂದ್ರದ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಹರಿಯಾಣದ ಪಂಚಕುಲ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಡೇರಾ ಸಚ್ಚಾ ಸೌಧದ ಬಾಬಾ ಗುರ್ಮೀತ್ ರಾಮ್ ರಹೀಂ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕಿಶನ್ ಲಾಲ್, ಜಸ್‌ಬೀರ್ ಸಿಂಗ್, ಅವತಾರ್ ಸಿಂಗ್ ಮತ್ತು ಸಬ್‌ದಿಲ್ ಹತ್ಯೆ ಅಪರಾಧಕ್ಕೆ ಶಿಕ್ಷೆಗೊಳಗಾದ ಇತರ ಆರೋಪಿಗಳಾಗಿದ್ದಾರೆ. … Continued