ಅಪಘಾತ ನೋಡಲು ಹೋದವರ ಮೇಲೆ ನುಗ್ಗಿದ ಕಾರು : ಪೊಲೀಸರು ಸೇರಿ 9 ಮಂದಿ ಸಾವು

ಅಹಮದಾಬಾದ್‌ :‌ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ಕಾರು ಡಿಕ್ಕಿ ಹೊಡೆದು ಪೊಲೀಸ್‌ ಸಿಬ್ಬಂದಿ ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಡಂಪರ್ ಟ್ರಕ್‌ ನಡುವೆ ತಡರಾತ್ರಿ 1:30 ರ ಹೊತ್ತಿಗೆ ಅಪಘಾತವೊಂದು ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಸೇರಿದಂತೆ … Continued

ಗುಜರಾತಿನಲ್ಲಿ ಮಳೆ ಅವಾಂತರಕ್ಕೆ 9 ಮಂದಿ ಸಾವು: ಜುನಾಗಢದಲ್ಲಿ ಒಂದೇ ದಿನ 40 ಸೆಂಮೀ ಮಳೆ..

ಅಹಮದಾಬಾದ್‌ : ಕಳೆದ 24 ಗಂಟೆಗಳಲ್ಲಿ ಗುಜರಾತಿನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ಕಚ್, ಜಾಮನಗರ, ಜುನಾಗಢ ಮತ್ತು ನವಸಾರಿಯಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ … Continued

ಚಾಲಕನಿಗೆ ಹೃದಯಾಘಾತವಾಗಿ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಬಸ್ : 9 ಸಾವು, 28 ಮಂದಿಗೆ ಗಾಯ

ಗಾಂಧಿನಗರ: ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಬಸ್ ಮತ್ತು ಎಸ್‌ಯುವಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ. ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಜನರಿಂದ ತುಂಬಿದ್ದ ಬಸ್ ಚಾಲಕನಿಗೆ ನವಸಾರಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48 ರಲ್ಲಿ ಹೃದಯಾಘಾತ … Continued

ನೈನಿತಾಲ್‌ನಲ್ಲಿ ಕಾರು ನದಿಗೆ ಬಿದ್ದು 9 ಸಾವು, ಇಬ್ಬರ ರಕ್ಷಣೆ

ಡೆಹ್ರಾಡೂನ್‌: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಎರ್ಟಿಗಾ ಕಾರು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ವಾಹನದಲ್ಲಿ 11 ಮಂದಿ ಪ್ರಯಾಣಿಸುತ್ತಿದ್ದರು, ಅವರಲ್ಲಿ ಒಬ್ಬ ಹೆಣ್ಣು ಮಗು ಕೂಡ ಇತ್ತು ಎಂದು ಹೇಳಲಾಗಿದೆ. ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಅಗ್ನಿಶಾಮಕ ತಂಡವು ಸ್ಥಳಕ್ಕೆ ಧಾವಿಸಿದೆ. ವರದಿಯ … Continued