ಶೀಶ್ ಮಹಲ್ ವಿವಾದ : ಅರವಿಂದ ಕೇಜ್ರಿವಾಲ್ ಹಿಂದಿನ ಬಂಗಲೆ ನವೀಕರಣ ಪ್ರಕರಣದ ತನಿಖೆಗೆ ಸಿವಿಸಿ ಆದೇಶ

ನವದೆಹಲಿ: ಸಿಪಿಡಬ್ಲ್ಯುಡಿ ಸಲ್ಲಿಸಿದ ವಾಸ್ತವ ವರದಿಯ ಆಧಾರದ ಮೇಲೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸ, 6 ಫ್ಲಾಗ್‌ಸ್ಟಾಫ್ ಬಂಗಲೆಯ ನವೀಕರಣದ ಕುರಿತು ಕೇಂದ್ರ ಜಾಗೃತ ಆಯೋಗ(Central Vigilance Commission)ವು ತನಿಖೆಗೆ ಆದೇಶಿಸಿದೆ. 6 ಫ್ಲಾಗ್‌ಸ್ಟಾಫ್ ಬಂಗಲೆಯ ಬಂಗಲೆ ನವೀಕರಣದ ತನಿಖೆಗೆ ಫೆಬ್ರವರಿ 13 ರಂದು ಆದೇಶ ನೀಡಲಾಯಿತು. ಕೇಂದ್ರ ಲೋಕೋಪಯೋಗಿ ಇಲಾಖೆ … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ವೀಡಿಯೊ…| ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ದ್ರವ ಎರಚಿದ ವ್ಯಕ್ತಿ…!

ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ ಪ್ರದೇಶದಲ್ಲಿ ಶನಿವಾರ ಹೈ ಡ್ರಾಮಾ ನಡೆದಿದ್ದು, ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ದ್ರವ ಎಸೆದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಕೇಜ್ರಿವಾಲ್‌ ಅವರನ್ನು ಹಿಡಿಯಲು ಪ್ರಯತ್ನಿಸುತ್ತಿರುವುದನ್ನು ತೋರಿಸಿದೆ. ಕೇಜ್ರಿವಾಲ್ ಅವರ ಮೇಲೆ ದ್ರವವನ್ನು ಎಸೆದ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಎಎಪಿ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷ ಗುರುವಾರ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಪಕ್ಷದ ದೆಹಲಿ ಸಂಚಾಲಕ ಗೋಪಾಲ ರೈ ಹೇಳಿದ್ದಾರೆ. 2025ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಹೊಸ ವೀಡಿಯೊ ಹೊರಬಿದ್ದಿದ್ದು, ಸ್ವಾತಿ ಮಲಿವಾಲ್ ಅವರನ್ನು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹೊರಕ್ಕೆ ಕರೆದೊಯ್ದಿರುವುದು ಕಂಡುಬಂದಿದೆ. ಇದು ಸೋಮವಾರ ನಡೆದಿದ್ದು, ಅದೇ ದಿನ ಎಎಪಿ ಸಂಸದೆ ಸ್ವಾತಿ ಮಲಿವಾಲ್‌ ತಮ್ಮ ಮೇಲೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕ ಸಹಾಯಕ ವಿಭವಕುಮಾರ ಹಲ್ಲೆ ನಡೆಸಿದ್ದಾರೆ … Continued

ಖಂಡನೀಯ…’: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ ಒಪ್ಪಿಕೊಂಡ ಎಎಪಿ ನಾಯಕ ಸಂಜಯ ಸಿಂಗ್

ನವದೆಹಲಿ : ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕರು ಕಿರುಕುಳ ನೀಡಿದ್ದಾರೆ. ಆಪ್ತ ಸಹಾಯಕ ದೆಹಲಿ ಮುಖ್ಯಮಂತ್ರಿಗಳ ನಗರದ ನಿವಾಸದಲ್ಲಿ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದರು” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ ಸಿಂಗ ಮಂಗಳವಾರ ಮಧ್ಯಾಹ್ನ ಹೇಳಿದ್ದಾರೆ, ಸಂಜಯ ಸಿಂಗ್‌ ಅವರು … Continued

ದೆಹಲಿ ಸಿಎಂ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ; ಎಎಪಿ ನಾಯಕಿ ಸ್ವಾತಿ ಮಲಿವಾಲ್ ಎಂದು ಹೇಳಿಕೊಂಡ ಮಹಿಳೆಯಿಂದ ಪೊಲೀಸರಿಗೆ 2 ಕರೆಗಳು : ಮೂಲಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕ (ಪಿಎ) ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಿಸಿಆರ್ ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಗ್ಗೆ ದೆಹಲಿ ಪೊಲೀಸರಿಗೆ ಸತತ ಎರಡು ಕರೆಗಳು ಬಂದಿದ್ದು, ಇವೆರಡೂ ಸಿವಿಲ್ … Continued

ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued