ಆಕ್ಷೇಪಾರ್ಹ ವಿಡಿಯೋ ವಿವಾದ: ಪಂಜಾಬ್ ಸಿಎಂ ಭಗವಂತ ಮಾನ್ ‘ಗುರು ದ್ರೋಹಿ’, ‘ಸಮುದಾಯ ವಿರೋಧಿ’ ಎಂದು ಅಕಾಲ ತಖ್ತ್ ಘೋಷಣೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿರುದ್ಧ ಅತ್ಯಂತ ಕಠಿಣ ನಿಲುವು ತಳೆದಿರುವ ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಾಲ ತಖ್ತ್’, ಭಗವಂತ ಮಾನ್ ಅವರನ್ನು ‘ಗುರು ವಿರೋಧಿ’ ಎಂದು ಘೋಷಿಸಿದೆ. ಅಲ್ಲದೆ, ಸಿಖ್ ಸಮುದಾಯವು (ಪಂಥ) ಅವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ಕರೆ ನೀಡಿದೆ. ಸಿಖ್ ಭಕ್ತರ ಕುರಿತು … Continued

ಎಎಪಿ ಬಂಡಾಯದ ಒಳನೋಟ : ಸಂಸದರ ಸಾಮೂಹಿಕ ಪಕ್ಷಾಂತರಕ್ಕೆ ರಾಘವ ಚಡ್ಡಾ ಸ್ಕೆಚ್ ಹಾಕಿದ್ದು ಹೇಗೆ ?

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಾರ್ಟಿಯ (AAP) ಪ್ರಭಾವಿ ನಾಯಕ ರಾಘವ ಚಡ್ಡಾ ನೇತೃತ್ವದಲ್ಲಿ ಏಳು ಮಂದಿ ರಾಜ್ಯಸಭಾ ಸಂಸದರು ಪಕ್ಷಕ್ಕೆ ವಿದಾಯ ಹೇಳಿ ಭಾರತೀಯ ಜನತಾ ಪಾರ್ಟಿ (BJP) ಜೊತೆ ವಿಲೀನವಾಗಿದ್ದಾರೆ. ಈ ಬೆಳವಣಿಗೆಯು ಪಾರ್ಲಿಮೆಂಟ್‌ನಲ್ಲಿ ಎಎಪಿಯ ಬಲವನ್ನು ಕುಗ್ಗಿಸಿರುವುದು ಮಾತ್ರವಲ್ಲದೆ, 2027ರ ಪಂಜಾಬ್ ವಿಧಾನಸಭೆ ಚುನಾವಣೆಯ … Continued

ಎಎಪಿಗೆ ದೊಡ್ಡ ಆಘಾತ : ಬಿಜೆಪಿ ಸೇರುವುದಾಗಿ ರಾಘವ ಚಡ್ಡಾ ಸೇರಿ 7 ಸಂಸದರ ಘೋಷಣೆ…!

ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಬೆನ್ನಲ್ಲೇ ಅರವಿಂದ ಕೇಜ್ರಿವಾಲ್ ವಿರುದ್ಧ ಬಂಡೆದ್ದಿರುವ ಸಂಸದ ರಾಘವ್ ಚಡ್ಡಾ, ಶುಕ್ರವಾರ ಎಎಪಿಗೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರುವುದಾಗಿ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಚಡ್ಡಾ, ಎಎಪಿಯ … Continued

ನನ್ನನ್ನು ಮೌನಗೊಳಿಸಬಹುದು..ಸೋಲಿಸಲಾಗದು : ರಾಘವ ಚಡ್ಡಾ ವೀಡಿಯೊ ಸಂದೇಶದಿಂದ ಎಎಪಿ ಆಂತರಿಕ ಕಲಹ ಸ್ಫೋಟ

ನವದೆಹಲಿ: ಆಮ್ ಆದ್ಮಿ ಪಕ್ಷವು (AAP) ರಾಜ್ಯಸಭೆಯ ಉಪ ನಾಯಕನ ಸ್ಥಾನದಿಂದ ರಾಘವ ಚಡ್ಡಾ ಅವರನ್ನು ದಿಢೀರ್ ಕೆಳಗಿಳಿಸಿದ ಬೆನ್ನಲ್ಲೇ, ಪಕ್ಷದ ಆಂತರಿಕ ಕಲಹ ಸ್ಫೋಟಗೊಂಡಿದೆ. ಈ ಬೆಳವಣಿಗೆಯ ಕುರಿತು ಶುಕ್ರವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಘವ ಚಡ್ಡಾ, “ನನ್ನನ್ನು ಮೌನಗೊಳಿಸಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ” ಎಂದು ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದಾರೆ. ವಿಡಿಯೋ ಸಂದೇಶವೊಂದನ್ನು ಬಿಡುಗಡೆ … Continued

ಎಎಪಿ ರಾಜ್ಯಸಭೆ ಉಪನಾಯಕನ ಸ್ಥಾನದಿಂದ ಪ್ರಮುಖ ನಾಯಕ ರಾಘವ ಚಡ್ಡಾ ವಜಾ…! ದಿಢೀರ್‌ ಬದಲಾವಣೆಗೆ ಕಾರಣ ?

 ನವದೆಹಲಿ: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (AAP) ತನ್ನ ಸಂಸದೀಯ ಮಂಡಳಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೆಳಗಿಳಿಸಿದ್ದು, ಅವರ ಜಾಗಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಿಸಲಾಗಿದೆ. ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಚಾನ್ಸಲರ್ ಆಗಿರುವ ಅಶೋಕ ಮಿತ್ತಲ್ ಈಗ ಮೇಲ್ಮನೆಯಲ್ಲಿ … Continued

ಬಿಹಾರದಲ್ಲಿ ಹೀನಾಯ ಸೋಲಿನ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ತೀವ್ರ ; ಕಾಂಗ್ರೆಸ್‌ ನಾಯಕತ್ವದ ಮುಂದೆ ದೊಡ್ಡ ಸವಾಲು…

ಬಿಹಾರದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ ನಂತರ ‘ಇಂಡಿಯಾ’ (INDIA) ಮೈತ್ರಿಕೂಟವು ಅತ್ಯಂತ ಗಂಭೀರವಾದ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮೈತ್ರಿಕೂಟದ ಹಲವಾರು ಪ್ರಾದೇಶಿಕ ಅಂಗಪಕ್ಷಗಳು ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಬಹಿರಂಗವಾಗಿ ಪ್ರಶ್ನೆಗಳನ್ನು ಎತ್ತುತ್ತಿವೆ. ಇವು ಆರಂಭದಲ್ಲಿ ಅಸಮಾಧಾನದ ಸಣ್ಣ ಮಾತುಗಳಾಗಿದ್ದವು, ಆದರೆ ಬಿಹಾರದ ಚುನಾವಣೆಯಲ್ಲಿ ಮಹಾಘಟಬಂಧನದ ಹೀನಾಯ ಸೋಲಿನ … Continued

ʼಇಂಡಿಯಾʼ ಮೈತ್ರಿಕೂಟದಿಂದ ಅಧಿಕೃತವಾಗಿ ಹೊರಬಂದ ಆಮ್‌ ಆದ್ಮಿ ಪಾರ್ಟಿ

ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ಹೇಳಿದ್ದು, ವಿಪಕ್ಷಗಳ ಮೈತ್ರಿಕೂಟದ ಭಾಗವಾಗಿ ಉಳಿದಿಲ್ಲ ಎಂದು ಹೇಳಿದೆ. ಅಲ್ಲದೆ ಇಂಡಿಯಾ ಬ್ಲಾಕ್‌ ನೇತೃತ್ವ ವಹಿಸಿರುವ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಅದು ಪ್ರಶ್ನಿಸಿದೆ. ದೇಶದಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲು ಶನಿವಾರ (ಜುಲೈ ೧೯) ಸಂಜೆ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ … Continued

ದೆಹಲಿ ವಿಧಾನಸಭೆ ಚುನಾವಣೆ : ಎಎಪಿ ಸೋಲಲು 10 ಪ್ರಮುಖ ಕಾರಣಗಳು….

ನವದೆಹಲಿ : 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯವನ್ನು ದಾಖಲಿಸಿದೆ. ಒಂದು ದಶಕಗಳ ಕಾಲ ದೆಹಲಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಕನಸು ನುಚ್ಚು ನೂರಾಗಿದೆ. ಅಂಕಿಅಂಶಗಳ ಪ್ರಕಾರ, 70 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ೪೮ ಸ್ಥಾನಗಳನ್ನು ಗೆದ್ದಿದೆ, ಆದರೆ … Continued

ದೆಹಲಿ ವಿಧಾನಸಭೆ ಚುನಾವಣೆ: ಸೋತುಹೋದ ಎಎಪಿ ಘಟನಾಘಟಿ ನಾಯಕರು ಇವರು…

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ್ದು, ಒಟ್ಟು 70 ವಿದಾನಸಭಾ ಕ್ಷೇತ್ರಗಳಲ್ಲಿ 48ರಲ್ಲಿ ಬಿಜೆಪಿ ಜಯಗಳಿಸಿದೆ. ಕಳೆದ ಬಾರಿ 62 ಸ್ಥಾನಗಳಲ್ಲಿ ಜಯಗಳಿಸಿದ್ದು ಎಎಪಿ ಈ ಬಾರಿ ಕೇವಲ 22 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮುಗ್ಗರಿಸಿದೆ. ಅರವಿಂದ ಕೇಜ್ರಿವಾಲ್‌ ಸೇರಿದಂತೆ ಎಎಪಿಯ ಘಟಾನುಘಟಿ ನಾಯಕರು ಸೋತುಹೋಗಿದ್ದಾರೆ. ಮನೀಶ ಸಿಸೋಡಿಯಾ ಮತ್ತು ಪ್ರಮುಖ ಸಚಿವ ಸೌರಭ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿ ಗುಡಿಸಿ ಹಾಕಿದ ಬಿಜೆಪಿ ; 48ರಲ್ಲಿ ಬಿಜೆಪಿಗೆ ಜಯ, ಎಎಪಿಗೆ ಕೇವಲ 22 ಸ್ಥಾನ, ಕಾಂಗ್ರೆಸ್‌ ಶೂನ್ಯ

ನವದೆಹಲಿ: 27 ವರ್ಷಗಳ ವನವಾಸದ ನಂತರ, ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದು ದಶಕದ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ಹೀನಾಯವಾಗಿ ಸೋತಿದ್ದು, ಅದರ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಘಟನಾಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಒಟ್ಟು 70 ಸ್ಥಾನಗಳ ದೆಹಲಿ … Continued