ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ನಾಟ್‌ ಓಕೆ..? ಆಪ್ ಜೊತೆ ಮೈತ್ರಿ ಇಲ್ಲ ; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್‌ ಪಕ್ಷವು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದು, ಏಕಾಂಗಿಯಾಗಿ ಸ್ಪರ್ಧಿವುದಾಗಿ ಶುಕ್ರವಾರ ಪ್ರಕಟಿಸಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ. ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ಎಎಪಿ ತೊರೆದ ಒಂದು ದಿನದ ನಂತರ ಬಿಜೆಪಿ ಸೇರಿದ ದೆಹಲಿಯ ಮಾಜಿ ಸಚಿವ ಕೈಲಾಶ ಗಹ್ಲೋಟ್

ನವದೆಹಲಿ : ಆಮ್ ಆದಿ ಪಕ್ಷ (ಎಎಪಿ) ತೊರೆದ ಒಂದು ದಿನದ ನಂತರ, ದೆಹಲಿಯ ಮಾಜಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸೋಮವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಮನೋಹರಲಾಲ ಖಟ್ಟರ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿಗೆ ಸೇರ್ಪಡೆಯಾದ … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಈಗ ಆಸ್ಪತ್ರೆಗೆ ದಾಖಲು..!

ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಲುಷಿತ ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ಕೆಲವೇ ದಿನಗಳಲ್ಲಿ ರಾಮಮನೋಹರ ಲೋಹಿಯಾ(ಆರ್‌ಎಂಎಲ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತಗೊಂಡಿರುವ ಯಮುನಾ ನದಿಯನ್ನು ಶುಚಿಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ವೇಳೆ ಈವರೆಗೂ ಯಮುನಾ ನದಿಯನ್ನು ಶುಚಿಗೊಳಿಸದ ಆಪ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವೀರೇಂದ್ರ ಸಚದೇವ … Continued

ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಅತಿಶಿಗೆ ಸೇರಿದ ವಸ್ತುಗಳನ್ನು ಸಿಎಂ ನಿವಾಸದಿಂದ ಹೊರಹಾಕಲಾಗಿದೆ: ಎಎಪಿ ಆರೋಪ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ. ಇದು ಎಎಪಿ ಮತ್ತು ಕೇಂದ್ರದ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಉಗ್ರ ಅಫ್ಜಲ್ ಗುರು ಪರ ನಿಂತ ಕುಟುಂಬದ ಅತಿಶಿಗೆ ದೆಹಲಿ ಸಿಎಂ ಪಟ್ಟ ; ಮಲಿವಾಲ್ ಆರೋಪ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಎಎಪಿ

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ​ ಕೇಜ್ರಿವಾಲ್​ ಮುಖ್ಯಮಂತ್ರಿ ಕುರ್ಚಿಯನ್ನು ಆಪ್​ ನಾಯಕಿ ಅತಿಶಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರವಿಂದ ಕೇಜ್ರಿವಾಲ್ ಅವರ ದೆಹಲಿ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ವೀಡಿಯೊ | ‘ಅವರು ನನ್ನ ಮಾತು ಕೇಳಲೇ ಇಲ್ಲ..’: ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕೇಜ್ರಿವಾಲ್ ನಿರ್ಧಾರಕ್ಕೆ ಅಣ್ಣಾ ಹಜಾರೆ ಪ್ರತಿಕ್ರಿಯೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನಗಳಲ್ಲಿ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ಅರವಿಂದ … Continued