ಪ್ರಜಾಪ್ರಭುತ್ವವನ್ನು ಈ ರೀತಿ ಕಗ್ಗೊಲೆ ಮಾಡಲು ಬಿಡುವುದಿಲ್ಲ: ಚಂಡೀಗಢ ಮೇಯರ್ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್‌ ಸಿಡಿಮಿಡಿ

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿಯನ್ನು ಕಾನೂನುರೀತ್ಯಾ ವಿಚಾರಣೆಗೆ ಒಳಪಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಚುನಾವಣಾಧಿಕಾರಿಯು ಮತಪತ್ರ ವಿರೂಪಗೊಳಿಸುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ಹೇಳಿತು. ಮೇಯರ್ ಚುನಾವಣೆಯಲ್ಲಿ ಸೋತ ಆಮ್ ಆದ್ಮಿ ಪಕ್ಷದ (ಎಎಪಿ) … Continued

ಚಂಡೀಗಢ ಮೇಯರ್ ಚುನಾವಣೆ : ಇಂಡಿಯಾ ಮೈತ್ರಿಕೂಟದ ವಿರುದ್ಧ ಬಿಜೆಪಿಗೆ ಜಯ, 8 ಮತಗಳು ಅಸಿಂಧು, ಎಎಪಿ-ಕಾಂಗ್ರೆಸ್ ಕೋರ್ಟ್‌ ಮೊರೆ

ಚಂಡೀಗಢ : ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿಯ ಮೊದಲ ನೇರ ಹಣಾಹಣಿಯಲ್ಲಿ ಮಂಗಳವಾರ ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜಕುಮಾರ ಸೋಂಕರ್ ಅವರು ಗೆಲುವು ಸಾಧಿಸಿದ್ದಾರೆ. 8 ಮತಗಳು ಅಸಿಂಧುವಾದ ನಂತರ ಅವರು ಎಎಪಿ-ಕಾಂಗ್ರೆಸ್ ಜಂಟಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಪದನಿಮಿತ್ತ ಸದಸ್ಯ ಹಾಗೂ ಸಂಸದೆ ಕಿರಣ್ ಖೇರ್ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ. ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ಅರವಿಂದ್ ಕೇಜ್ರಿವಾಲರನ್ನು ‘ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್’ ಎಂದು ಕರೆದ ಓವೈಸಿ, ತಿರುಗೇಟು ನೀಡಿದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಂಘ ಪರಿವಾರದ ರಾಜಕೀಯವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್” ಎಂದು ಕರೆದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ದೆಹಲಿಯಲ್ಲಿ ಸುಂದರಕಾಂಡ ಪಠಣ ಕಾರ್ಯಕ್ರಮವನ್ನು … Continued

ನ್ಯಾಯಾಲಯದಲ್ಲಿ ರಾಜಕೀಯ ಭಾಷಣ ಮಾಡಿದ್ದಕ್ಕೆ ಎಎಪಿಯ ಸಂಜಯ್ ಸಿಂಗ್ ಗೆ ಎಚ್ಚರಿಕೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಎಎಪಿ ಸಂಸದ ಸಂಜಯ ಸಿಂಗ್ ಅವರಿಗೆ “ರಾಜಕೀಯ ಭಾಷಣ” ನೀಡದಂತೆ ಎಚ್ಚರಿಕೆ ನೀಡಿದೆ. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‌ ಅವರು ಕೈಗಾರಿಕೋದ್ಯಮಿ ಗೌತಮ ಅದಾನಿ ಅವರ ಹೆಸರನ್ನು ನ್ಯಾಯಾಲಯದಲ್ಲಿ ಪ್ರಸ್ತಾಪಿಸಿದ್ದರು. … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ಟಿಎಂಸಿ, ಎಎಪಿ, ಸಿಪಿಐ ನಿರ್ಧಾರ

ನವದೆಹಲಿ: ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಘೋಷಿಸಿದ ಕೆಲವೇ ಗಂಟೆಗಳ ನಂತರ, ಆಮ್ ಆದ್ಮಿ ಪಕ್ಷವೂ (ಎಎಪಿ) ಕಾರ್ಯಕ್ರಮಕ್ಕೆ ಹಾಜರಾಗಲು ಗೈರುಹಾಜರಾಗಲು ನಿರ್ಧರಿಸಿತು. ಎಎಪಿ ರಾಜ್ಯಸಭಾ ಸಂಸದ ಸಂಜಯ ಸಿಂಗ್ ಅವರು ಟ್ವಿಟರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ರಾಷ್ಟ್ರಪತಿಗಳನ್ನು … Continued

ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ಜೋಕ್ ಆಗಿ ಪರಿವರ್ತಿಸಿದೆ : ದೆಹಲಿ ಸುಗ್ರೀವಾಜ್ಞೆ ವಿರುದ್ಧ ಎಎಪಿ, ಟಿಎಂಸಿ ವಾಗ್ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ಸ್ಥಾಪಿಸುವ ಕೇಂದ್ರ ಸುಗ್ರೀವಾಜ್ಞೆ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಿದರು, ಇದು ಮೂಲಭೂತವಾಗಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕೆ ಅಧಿಕಾರಶಾಹಿಗಳ ಪೋಸ್ಟಿಂಗ್ ಮತ್ತು ವರ್ಗಾವಣೆಯ ನಿಯಂತ್ರಣವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ರದ್ದುಗೊಳಿಸುತ್ತದೆ. … Continued

8 ಕೋಟಿ ಅಕ್ರಮ ಹಣ ಸಿಕ್ಕರೂ ಶಾಸಕ ವಿರೂಪಾಕ್ಷಪ್ಪ ಅವರನ್ನು ಯಾಕೆ ಬಂಧಿಸಿಲ್ಲ : ಬಿಜೆಪಿಗೆ ಕೇಜ್ರಿವಾಲ್‌ ಪ್ರಶ್ನೆ

 ದಾವಣಗೆರೆ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ನಿವಾಸದಿಂದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ವಶ ಪಡಿಸಿಕೊಂಡ ನಂತರವೂ … Continued