ಮೈ ಜುಂ ಎನ್ನುವ ವಿಡಿಯೋ | ಆಕಾಶದಲ್ಲಿ ಪ್ಯಾರಾಗ್ಲೈಡರ್‌ಗೆ ಡಿಕ್ಕಿ ಹೊಡೆದ ವಿಮಾನ ; ಪವಾಡಸದೃಶವಾಗಿ ಪಾರಾದ ಮಹಿಳೆ !

ವಿಯೆನ್ನಾ: ಆಸ್ಟ್ರಿಯಾದ ಆಲ್ಪ್ಸ್ ಪರ್ವತ ಶ್ರೇಣಿಯಲ್ಲಿ ಹಾರಾಟ ನಡೆಸುತ್ತಿದ್ದ ಪ್ಯಾರಾಗ್ಲೈಡರ್‌ಗೆ ಸಣ್ಣ ಪ್ರವಾಸಿ ವಿಮಾನವೊಂದು ನೇರವಾಗಿ ಢಿಕ್ಕಿ ಹೊಡೆದ ಅತ್ಯಂತ ಭಯಾನಕ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ವಿಮಾನದ ರೆಕ್ಕೆ ಬಡಿದ ರಭಸಕ್ಕೆ ಪ್ಯಾರಾಗ್ಲೈಡರ್‌ನ ಕ್ಯಾನೋಪಿ (ಮೇಲ್ಛಾವಣಿ) ಎರಡು ಭಾಗಗಳಾಗಿ ಸೀಳಿದ್ದು, ಪ್ಯಾರಾಗ್ಲೈಡರ್ ಸವಾರಿ ಮಾಡುತ್ತಿದ್ದ ಮಹಿಳೆ ಕಿರುಚುತ್ತಾ ಆಕಾಶದಿಂದ ಕೆಳಗೆ ಬಂದು ಭೂಮಿ ಮೇಲೆ … Continued

ಅಮೆರಿಕ ವಿಮಾನ ದುರಂತ: ಟೇಕ್‌ಆಫ್ ವೇಳೆ ಯುಪಿಎಸ್ ವಿಮಾನದ ಇಂಜಿನ್ ಕಳಚಿ ಬಿದ್ದ ವಿಡಿಯೋ ಬಿಡುಗಡೆ ಮಾಡಿದ ಎನ್‌ಟಿಎಸ್‌ಬಿ

ಲೂಯಿಸ್‌ವಿಲ್ಲೆ (ಕೆಂಟಕಿ): ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಯುಪಿಎಸ್ (UPS) ಸರಕು ಸಾಗಣೆ ವಿಮಾನವೊಂದು ಭೀಕರ ಅಪಘಾತಕ್ಕೀಡಾದ ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯಾವಳಿಗಳನ್ನು ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಬಿಡುಗಡೆ ಮಾಡಿದೆ. ವಿಮಾನದ ರೆಕ್ಕೆಯಿಂದ ಎಡ ಇಂಜಿನ್ ಕಳಚಿಕೊಂಡು ಬಿದ್ದ ಭೀಕರ ಕ್ಷಣಗಳು ಈ ವಿಡಿಯೋದಲ್ಲಿ ಸೆರೆಯಾಗಿವೆ. ನವೆಂಬರ್ 4, 2025 ರಂದು  ನಡೆದ … Continued

ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಶಿಕ್ಷಕಿ ಸಾವು

ಕಾರವಾರ: ಸ್ಕೂಟಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ(siddapur) ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ … Continued

ಯಲ್ಲಾಪುರ : ಮದುವೆಯಿಂದ ವಾಪಸ್‌ ಬರುವಾಗ ಮಿನಿ ಬಸ್‌ ಅಪಘಾತ ; ಹಲವರಿಗೆ ಗಾಯ

ಕಾರವಾರ: ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್‌ ಅಪಘಾತಕ್ಕೀಡಾಗಿ 10ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯಲ್ಲಿ ನಡೆದ ತಮ್ಮ ಸಂಬಂಧಿಕರ ಮದುವೆ ಮುಗಿಸಿ ವಾಪಸ್‌ ಆಗುವಾಗ ರಾಷ್ಟ್ರೀಯ ಹೆದ್ದಾರಿ 52ರ ಅರಬೈಲ್ ಘಟ್ಟದ ತಿರುವುಗಳಲ್ಲಿ ಅವರಿದ್ದ … Continued

ಬೈಂದೂರು : ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ ; ಇಬ್ಬರು ಸಾವು, ಹಲವರಿಗೆ ಗಾಯ

ಉಡುಪಿ:  ಟ್ಯಾಂಕರ್‌ ಹಾಗೂ ಪ್ರವಾಸಿ ಬಸ್‌ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Udupi Bus Accident) ಬೈಂದೂರು ತಾಲೂಕಿನ ತ್ರಾಸಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, … Continued

ಯಲ್ಲಾಪುರ : ಅರೆಬೈಲ್‌ ಘಟ್ಟದಲ್ಲಿ ಕಾರಿನಲ್ಲಿ ಸಜೀವ ದಹನವಾದ ಚಾಲಕ

ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೋಕ್ಸ್‌ ವ್ಯಾಗನ್‌ (Volkswagen) ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ … Continued

ಕುಮಟಾ : ಲಾರಿ-ಬೈಕ್‌ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಕುಮಟಾ: ಬೈಕ್‌ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಸರ್ಕಲ್ ಬಳಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಬೈಕ್‌ ಸವಾರ ಸುಬ್ರಹ್ಮಣ್ಯ ಅಂಬಿಗ (35) ಎಂದು ಗುರುತಿಸಲಾಗಿದೆ. ಸಹ … Continued

ಶಿರಸಿ : ಎರಡು ಬಸ್‌ಗಳ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಶುಕ್ರವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಭಟ್ಕಳದಿಂದ ಹುಬ್ಬಳ್ಳಿ ಮಾರ್ಗವಾಗಿ ಮುದ್ದೆಬಿಹಾಳಕ್ಕೆ ಹೋಗುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ ಮತ್ತು ಶಿರಸಿ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ … Continued

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued

ವೀಡಿಯೊ | ಹಾವೇರಿ : ಬಸ್‌ ನಿಲ್ದಾಣದ ಪ್ಲಾಟ್​ಫಾರ್ಮಿಗೆ ನುಗ್ಗಿದ ಬಸ್‌ ; ಮಗು ಸಾವು, ನಾಲ್ವರಿಗೆ ಗಾಯ

ಹಾವೇರಿ: ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರಿಡಾರ್‌ಗೆ ನುಗ್ಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡ ಎರಡೂ ವರ್ಷದ ಮಗು ಮೃತಪಟ್ಟ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ-ಲಕ್ಷ್ಮೇಶ್ವರ ಬಸ್‌ ಅತಿವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿ, ಪ್ಲಾಟ್‌ ಫಾರ್ಮ್‌ಗೆ ನುಗ್ಗಿ ಮುಂದೆ … Continued