ಬೆಚ್ಚಿ ಬೀಳಿಸುವ ವೀಡಿಯೊ..| ಬೆಂಗಳೂರು : ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್‌ ; ಪೊಲೀಸ್‌ ಅಧಿಕಾರಿ ಸಾವು

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಎರಡು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಬಳಿ ಸೋಮವಾರ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ … Continued

ಬೈಲಹೊಂಗಲ | ಭೀಕರ ರಸ್ತೆ ಅಪಘಾತ; ಮಗು ಸೇರಿ ಸ್ಥಳದಲ್ಲೇ ಮೂವರು ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಸ್ಥಳದಲ್ಲಿಯೇ ಮೃತಪಟ್ಟವರು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್…!

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು, ಅದರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಟೆಂಪೋ ಟ್ರಾವೆಲರ್ ವಿಮಾನಕ್ಕೆ ಡಿಕ್ಕಿ ಹೊಡೆದಿದ್ದು, ತನಿಖೆ ನಡೆಯುತ್ತಿದೆ ಎಂದು ಇಂಡಿಗೋ ಹೇಳಿಕೆ ತಿಳಿಸಿದೆ. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. … Continued

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರು ಅಪಘಾತ ಪ್ರಕರಣ ; ಮಹಾರಾಷ್ಟ್ರದ ಲಾರಿ ಚಾಲಕನ ಬಂಧನ

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತನಾಗಿದ್ದಾನೆ. ಜನವರಿ 14 ರಂದು ಅಂಬಡಗಟ್ಟಿ … Continued

ಮೈ ಜುಂ ಎನ್ನುವ ವೀಡಿಯೊ…| ಬೆಂಗಳೂರಲ್ಲಿ ಲಾರಿ ಹಿಂದಿಕ್ಕಲು ಹೋಗಿ ಮೂರ್ನಾಲ್ಕು ಪಲ್ಟಿ ಹೊಡೆದ ನೀರಿನ ಟ್ಯಾಂಕರ್…!

ಬೆಂಗಳೂರಿನಲ್ಲಿ ಟ್ರಕ್ ಅನ್ನು ಹಿಂದಿಕ್ಕಲು ಹೋಗಿ ನೀರಿನ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ರಸ್ತೆಯ ಅಂಚಿನಿಂದ ಎಡಕ್ಕೆ ತಿರುಗುವಾಗ ಟ್ರಕ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಟ್ರಕ್‌ ಪಲ್ಟಿಯಾಗಿದ್ದು, ಐದಾರು ಸಲ ಪಲ್ಟಿಯಾಗಿ ಬಿದ್ದಿದೆ. ಎನ್‌ಡಿಟಿವಿ (NDTV) ವರದಿಯ ಪ್ರಕಾರ, ಸೋಮವಾರ ಮಧ್ಯಾಹ್ನ ದೊಮ್ಮಸಂದ್ರ ಬಳಿ ಈ ಘಟನೆ ಸಂಭವಿಸಿದೆ. ನೀರಿನ ಟ್ಯಾಂಕರ್ … Continued

ಜೇವರ್ಗಿ | ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರು ಸಾವು

ಕಲಬುರಗಿ : ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದು ಐವರು ಸಾವಿಗೀಡಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ಶನಿವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಿನಿ ಬಸ್‌ ಸಂಪೂರ್ಣ ನುಜ್ಜುಗುಜ್ಜಾಗಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ಮೆಹಬೂಬ್ … Continued

ಮೈ ಜುಂ ಎನ್ನುವ ವೀಡಿಯೊ..| ಬೈಕ್‌ ಸವಾರನನ್ನು ನುಂಗಿದ ರಸ್ತೆ ಮಧ್ಯೆ ಇದ್ದಕ್ಕಿದ್ದಂತೆ ಸೃಷ್ಟಿಯಾದ ದೊಡ್ಡ ಕುಳಿ, ಬೌನ್ಸ್‌ ಆಗಿ ಪಾರಾದ ಕಾರು…!

ಆಘಾತಕಾರಿ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದ್ದು, ಬೈಕು ಸಿಂಕ್‌ ಹೋಲ್‌ಗೆ ಕಣ್ಮರೆಯಾಗುವ ಭಯಾನಕ ದೃಶ್ಯ ಈ ವೀಡಿಯೊದಲ್ಲಿ ಸೆರೆಯಾಗಿದೆ. . ಈ ಭೀಕರ ಅಪಘಾತವು ದಕ್ಷಿಣ ಕೊರಿಯಾದಲ್ಲಿ ಸಂಭವಿಸಿದೆ ಎಂದು ಹೇಳಲಾಗಿದ್ದು, ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾದ ದೊಡ್ಡ ಕುಳಿ ಮೋಟಾರ್ಸೈಕ್ಲಿಸ್ಟ್‌ ಅನ್ನು ನುಂಗಿದ ಘಟನೆ ನಡೆದು 18 ಗಂಟೆಗಳ ನಂತರ ತೀವ್ರವಾಗಿ ಗಾಯಗೊಂಡಿದ್ದ ಸವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ. … Continued

ವೀಡಿಯೊ…| ಸ್ಕೂಟರಿಗೆ ಡಿಕ್ಕಿ ಹೊಡೆದ ನಂತರ ಅದನ್ನು 11 ಕಿಮೀ ಎಳೆದೊಯ್ದ ಕಾರು ; ರಸ್ತೆಯಲ್ಲಿ ಕಿಡಿಯೋ ಕಿಡಿ…

ಲಕ್ನೋ: ವೇಗವಾಗಿ ಬಂದ ಎಸ್ ಯುವಿ ಡಿಕ್ಕಿ ಹೊಡೆದ ನಂತರ ಸ್ಕೂಟರ್ ಅನ್ನು ಎಳೆದುಕೊಂಡು ಹೋಗುತ್ತಿರುವ ಆಘಾತಕಾರಿ ವೀಡಿಯೊ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ವೀಡಿಯೊದಲ್ಲಿ ಕಾರು ಸ್ಕೂಟರ್‌ ಅನ್ನು ಎಳೆದೊಯ್ಯುತ್ತಿರುವಾಗ ಕಿಡಿಯನ್ನು ಹೊರಸೂಸುತ್ತಿರುವುದನ್ನು ಕಾಣಬಹುದು. ಘಟನೆ ಭಾನುವಾರ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಾರಾಣಸಿ ನಿವಾಸಿಯಾಗಿರುವ ಇಂಜಿನಿಯರ್ ಬ್ರಜೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆ … Continued

ವೀಡಿಯೊ | ಮಂಗಳೂರು : ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಆದರೆ ಡಿಕ್ಕಿಯಾಗಿ ಕಾಂಪೌಂಡಿನಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ…!

ಮಂಗಳೂರು : ಬಿಎಸ್‌ಎನ್‌ಎಲ್‌ (BSNL) ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಕಾರನ್ನು ತಮ್ಮ ಪಕ್ಕದವ ಮನೆಯವರ ಮೋಟರ್‌ ಬೈಕ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ಕೊಲ್ಲು ಪ್ರಯತ್ನಕ್ಕೆ ಮುಂದಾಗಿದ್ದು, ಆದರೆ ಅದರ ಬದಲು ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿದ್ದಾರೆ. ಈ ಎದೆ ಝಲ್ ಎನಿಸುವಂಥ ಭೀಕರ … Continued

ಹಿರಿಯೂರು ಬಳಿ ಅಪಘಾತ ; ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ (ಮಾರ್ಚ್‌ 14) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್​ ಡಿಕ್ಕಿ … Continued