ವೀಡಿಯೊ…| ಕುಡಿದ ಮತ್ತಿನಲ್ಲಿ ಕಾರು ಓಡಿಸಿ ಮಹಿಳೆ ಸಾವು ; ಕಿಂಚಿತ್ತೂ ಪಶ್ಚಾತ್ತಾಪ ಪಡದೆ ʼಇನ್ನೊಂದು ರೌಂಡ್‌ʼ ಎಂದು ಅರಚಾಡಿದ ವಿದ್ಯಾರ್ಥಿ…!

ವಡೋದರಾ: ಗುಜರಾತಿನ ವಡೋದರಾದ ಕರೇಲಿಬಾಗ್ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕುಡಿದ ಅಮಲಿನಲ್ಲಿದ್ದ ಯುವಕ ಕಾರು ಗುದ್ದಿಸಿ ಮಹಿಳೆ ಜೀವ ತೆಗೆದಿದ್ದರೂ ಕೂಡ ಪಶ್ಚಾತಾಪವಿಲ್ಲದೆ ದರ್ಪದಿಂದ ವರ್ತಿಸಿರುವ ವೀಡಿಯೊ ವೈರಲ್ ಆಗಿದೆ. ಪಾನಮತ್ತ ಚಾಲಕ ತನ್ನ ಕಾರನ್ನು ಬಹು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. … Continued

ಚಿಕ್ಕಬಳ್ಳಾಪುರ | ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ತಾಯಿ, ಮಗನ ಸಜೀವ ದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿ ಹೊಡೆದ ನಂತರ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಆಂಧ್ರ ಮೂಲದ ತಾಯಿ ಕಲಾವತಿ (54) ಹಾಗೂ ಕಾರು ಚಾಲನೆ ಮಾಡುತ್ತಿದ್ದ ಧನಂಜಯ (34) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ … Continued

ಚಿತ್ರದುರ್ಗ | ಲಾರಿಗೆ ಗುದ್ದಿದ ಇನ್ನೋವಾ ಕಾರು ; ಐವರು ಸಾವು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಐವರು ಸಾವಿಗೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಸಿಬಾರ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಹಾಗೂ ಚಿದಂಬರ (50) ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗುರುತು ಪತ್ತೆಯಾಗಬೇಕಿದೆ. ಕಾರಿನಲ್ಲಿದ್ದ … Continued

ವೀಡಿಯೊ…| ರಾತ್ರಿ ವೇಳೆ ಜೆಸಿಬಿ ಚಲಾಯಿಸಿ 25 ವಾಹನಗಳಿಗೆ ಡಿಕ್ಕಿ ಹೊಡೆಸಿದ 17 ವರ್ಷದ ಬಾಲಕ…! ವೀಕ್ಷಿಸಿ

ಮಧುರೈ (ತಮಿಳುನಾಡು): ಸೋಮವಾರ ಮುಂಜಾನೆ ಮಧುರೈ ನಗರದ ಸೆಲ್ಲೂರ್ ಪ್ರದೇಶದಲ್ಲಿ 17 ವರ್ಷದ ಬಾಲಕನೊಬ್ಬ ಜೆಸಿಬಿ ಅಗೆಯುವ ಯಂತ್ರವನ್ನು ಚಲಾಯಿಸಿ ಮೂರು ಆಟೋ ರಿಕ್ಷಾಗಳು, ಹಲವಾರು ಮೋಟಾರ್‌ಸೈಕಲ್‌ಗಳು, ಕಾರು ಸೇರಿದಂತೆ ಸುಮಾರು 25 ವಾಹನಗಳು, ಸೈನ್‌ಬೋರ್ಡ್‌ಗಳು ಮತ್ತು ಕಟ್ಟಡದ ಒಂದು ಭಾಗವನ್ನು ಜಖಂಗೊಳಿಸಿರುವ ವಿಲಕ್ಷಣ ಘಟನೆ ನಡೆದಿದೆ. ಜೆಸಿಬಿ ಅಗೆಯುವ ಯಂತ್ರವನ್ನು ಚಲಾಯಿಸಲು ಆರಂಭಿಸಿದ ಬಾಲಕ … Continued

ಕೋಲಾರ | ಇನ್ನೋವಾ ಕಾರು-ಬೈಕ್‌ ಡಿಕ್ಕಿ; ಮಗು ಸೇರಿ ನಾಲ್ವರು ಸಾವು

ಕೋಲಾರ: ಇನ್ನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ಸಾವಿಗೀಡಾದ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ – ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಗಾತದಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ. ಮಹೇಶ (45), ಉದ್ವಿತಾ (3), ರತ್ನಮ್ಮ … Continued

ಟಿಪ್ಪರ್ – ಕಾರಿನ ನಡುವೆ ಡಿಕ್ಕಿ: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಸಾವು

ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಸಾವಿಗೀಡಾದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಮೈಸೂರಿನ ಶ್ರೀಲಕ್ಷ್ಮೀ, ಲಿಖಿತಾ, ಮಂಡ್ಯದ ಸುಹಾಸ್, ನಿತಿನ್ ಮತ್ತು ಶ್ರೇಯಸ್ ಮೃತಪಟ್ಟವರೆಂದು ತಿಳಿದುಬಂದಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, ಮಹಾಶಿವರಾತ್ರಿ ರಥೋತ್ಸವ … Continued

ವೀಡಿಯೊ..| ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಮಹಿಳೆ, ನಂತರ ಅಲ್ಲಿಂದ ಪರಾರಿ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹೌಸಿಂಗ್‌ ಸೊಸೈಟಿಯೊಂದರಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಕಾರು ಡಿಕ್ಕಿ ಹೊಡೆದು ಅದು ತೀವ್ರವಾಗಿ ಗಾಯಗೊಂಡಿದೆ. ಫೆಬ್ರವರಿ 24 ರಂದು ಸಂಜೆ 4:30 ರ ಸುಮಾರಿಗೆ ಗಾಜಿಯಾಬಾದ್‌ನ ರಾಜೇಂದ್ರ ನಗರ ವಿಸ್ತರಣೆಯಲ್ಲಿರುವ ಎಸ್‌ಜಿ ಗ್ರ್ಯಾಂಡ್ ಸೊಸೈಟಿಯಲ್ಲಿ ಸಂಭವಿಸಿದ ಘಟನೆಯ ನಂತರ ಕಾರು ಚಲಾಯಿಸುತ್ತಿದ್ದ ಮಹಿಳೆ ಸ್ಥಳದಿಂದ ಪರಾರಿಯಾಗಿದ್ದಾಳೆ. ಇಡೀ ಘಟನೆಯು ಸೊಸೈಟಿಯಲ್ಲಿ … Continued

ವೀಡಿಯೊ..| ದ್ವಿಚಕ್ರ ವಾಹನಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಕಾರು ; ಗಾಳಿಯಲ್ಲಿ ಎಸೆಯಲ್ಪಟ್ಟ ಬೈಕ್‌ ಸವಾರರು

ಆಘಾತಕಾರಿ ಘಟನೆಯೊಂದರಲ್ಲಿ, ಪುಣೆಯ ವಕಾಡ್ ಪ್ರದೇಶದ ಜನನಿಬಿಡ ಮುಂಬೈ-ಪುಣೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ ಹಾರಿಹೋಗಿ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತ್ತೊಂದು ಕಾರಿನ ಡ್ಯಾಶ್ ಕ್ಯಾಮ್‌ನಲ್ಲಿ ಈ ಘಟನೆ ಸೆರೆಯಾಗಿದೆ. ದೃಶ್ಯಾವಳಿಗಳ ಪ್ರಕಾರ, ವಕಾಡ್ ಪ್ರದೇಶದ … Continued

ಕುಂಭಮೇಳಕ್ಕೆ​ ತೆರಳುತ್ತಿದ್ದ ​ ವಾಹನ ಅಪಘಾತ: ಗೋಕಾಕದ 6 ಮಂದಿ ಸಾವು

ಬೆಳಗಾವಿ :ಪ್ರಯಾಗರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ(Gokak)ದ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪುರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗೋಕಾಕ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ … Continued

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕಾರು

ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್‌ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗಂಗೂಲಿ ತಮ್ಮ ರೇಂಜ್ … Continued